Categories: ರಾಜ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ- ಮಧ್ಯವರ್ತಿಗಳನ್ನ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು- ಸಿಎಂ ಸಿದ್ದರಾಮಯ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಹೇಳಿದರು.

ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.

ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು.

ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು. ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago