Categories: ರಾಜ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ- ಮಧ್ಯವರ್ತಿಗಳನ್ನ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು- ಸಿಎಂ ಸಿದ್ದರಾಮಯ್ಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಹೇಳಿದರು.

ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.

ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು.

ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು. ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.

ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

5 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

17 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

18 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago