ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.
ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು.
ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು. ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ. ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು.
ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…