Categories: ಕೋಲಾರ

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ತಿಂಗಳುಗಟ್ಟಲೆ, ವರ್ಷಗಟ್ಟಲೆ ಕಡತ ಇಟ್ಟುಕೊಂಡು ಏಕೆ‌ ಜನಸಾಮಾನ್ಯರನ್ನು, ರೈತರನ್ನು ಸತಾಯಿಸುತ್ತೀರಿ ಎಂದು ಪ್ರಶ್ನಿಸಿದರು.

ಕಾನೂನು ಪ್ರಕಾರವೇ ಕಡತ ವಿಲೇವಾರಿ ಮಾಡಿ. ಆದರೆ, ವರ್ಷಗಟ್ಟಲೇ ತಮ್ಮ ಬಳಿ ಕಡತಗಳನ್ನು ಇಟ್ಟುಕೊಳ್ಳುವ ಉದ್ದೇಶವಾದರೂ ಏನು? ಎಷ್ಟು ಕಡತಗಳು ತಮ್ಮ ಬಳಿ ವಿಲೇವಾರಿ ಆಗಲು ಬಾಕಿ ಇವೆ ಎಂದು ಕೇಳಿದ ಅವರು, ಮುಂದಿನ ಬುಧವಾರ ಮತ್ತೆ ಇಲ್ಲಿಗೆ ಭೇಟಿ ನೀಡುತ್ತೇನೆ. ಅಷ್ಟರಲ್ಲಿ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿರಬೇಕು ಇದು ಮನವಿ ಅಲ್ಲ ಗಡುವು ಎಂದರು.

ತಮಗೆ ಎಷ್ಟು ಹಣ ಬೇಕು ಹೇಳಿ, ನಾನೇ ಕೊಡುತ್ತೇನೆ?‌ ಆದರೆ, ಬಡಜನರ‌ನ್ನು ಪದೇಪದೇ ‌ ಕಚೇರಿಗೆ ಅಲೆಸದೆ ಕೆಲಸ ಮಾಡಿಕೊಡಿ. ನನ್ನ ಸ್ವಂತ ಕೆಲಸಕ್ಕೆಂದು ನಾನು ಯಾವತ್ತೂ ತಹಶೀಲ್ದಾರ್ ಕಚೇರಿಗೆ ‌ಬಂದಿಲ್ಲ ಪೋನು ಸಹ ಮಾಡಿಲ್ಲ ಆದರೆ ಸಾರ್ವಜನಿಕರ ಕೆಲಸ ವಿಳಂಬ ಮಾಡುತ್ತಿರುವ ಬಗ್ಗೆ ನನಗೆ ವಿಪರೀತ ದೂರುಗಳು ಬರುತ್ತಿವೆ. ರೈತರನ್ನು ಏಕೆ ಪದೇಪದೇ ಕಚೇರಿಗೆ ಅಲೆಸುತ್ತೀರಿ? ತಮ್ಮ ಟೇಬಲ್‌ಗೆ ಬರುವ ‌ಕಡತ‌ ಅಲ್ಲಿಂದ ಮುಂದೆ ಸಾಕಲು ಏಕೆ ವಿಳಂಬ ಮಾಡುತ್ತೀರಿ ಎಂದು ರೈತರು ಸಾಯಬೇಕು ಅವತ್ತು ಮಾಡಿಕೊಡತ್ತೀರ ಹೇಳಿ ಎಂದು ಅಧಿಕಾರಿಗಳ ವಿರುದ್ದ ಗರಂ ಆದರು.

ದ್ವಿತೀಯ ದರ್ಜೆ ಸಹಾಯಕಿಯರಾದ ಸುಜಾತಾ ಮತ್ತು ಚಾಮುಂಡೇಶ್ವರಿದೇವಿ ಬಳಿ ತೆರಳಿ ಹಳೆ ದಾಖಲೆಗಳನ್ನು ಜಾಲಾಡಿದರು. ಟೇಬಲ್‌ ಮೇಲೆ ರಾಶಿ ಕಡತ ಇಟ್ಟುಕೊಂಡು ಏನು ಮಾಡುತ್ತೀರಿ ಎಂದು ಕೇಳಿದರು. ಕೆಲವೊಂದು ದಾಖಲೆಗಳನ್ನು ಹುಡುಕಿ ಕೊಡಲು ಸಿಬ್ಬಂದಿ ಪರದಾಡಿದರು.

ಸರ್ವೆ ವಿಭಾಗ, ಟಪಾಲು ವಿಭಾಗ, ಡಿಜಿಟಲ್‌ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದ ಶಾಸಕರು ನಂತರ ಸಭಾಂಗಣದಲ್ಲಿ ತಹಶೀಲ್ದಾರ್‌ ಡಾ.ನಯನಾ ಹಾಗೂ ಇತರ ಅಧಿಕಾರಿಗಳ ಸಭೆ ನಡೆಸಿದರು.

ಪ್ರಮುಖವಾಗಿ ಸುಜಾತಾ ಹಾಗೂ ಸುಲೋಚನಾ ಅವರ ಮೇಲೆ ಹೆಚ್ಚು ದೂರುಗಳು ಬರುತ್ತಿವೆ. ಅವರನ್ನು ಮುಳಬಾಗಿಲಿಗೂ, ಶ್ರೀನಿವಾಸಪುರಕ್ಕೋ ವರ್ಗಾಯಿಸಲು ಜಿಲ್ಲಾಧಿಕಾರಿಗೆ ಹೇಳುತ್ತೇನೆ. ಸರ್ವೆ ವಿಭಾಗದ ಮೇಲೆ ಇರುವಷ್ಟು ದೂರು ಬೇರೆ ಎಲ್ಲೂ. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಇಲ್ಲಿಂದ ಹೊರಟುಬಿಡಿ. ಕೆಲಸ ಮಾಡದವರ ಹೆಸರು ಕೊಡಿ ಎಂದರು.

ಆಗ ತಹಶೀಲ್ದಾರ್‌ ನಯನಾ ಮಾತನಾಡಿ, ಸುಜಾತಾ ಅವರ ಕೆಲಸ ನಿಧಾನ. ಸುಲೋಚನಾ ಅವರ ಸಂಬಂಧ ಯಾವುದೇ ಭ್ರಷ್ಟಾಚಾರದ ದೂರುಗಳು ಇಲ್ಲ ಎಂದು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು ಹಾಗಾದರೆ ಯಾಕೆ ದೂರುಗಳು ಜಾಸ್ತಿ ಬರತ್ತೇವೆ ಹೇಳಿ ಎಂದು ಮರು ಪ್ರಶ್ನೆ ಹಾಕಿದರು.

‌ಸರ್ವೆ ಸಿಬ್ಬಂದಿ‌ ಕೊರತೆ ಇದ್ದು, ಕನಿಷ್ಠ ಇಬ್ಬರು ಸಿಬ್ಬಂದಿ ಬೇಕು ಎಂದು ಸರ್ವೆ ವಿಭಾಗದವರ ಆಗ್ರಹಿಸಿದರು.

ಡಾ.ನಯನಾ ವಿರುದ್ಧವೂ ದೂರುಗಳು ಬರುತ್ತಿರುವುದನ್ನು ಕೊತ್ತೂರು ಮಂಜುನಾಥ್‌ ಪ್ರಸ್ತಾಪಿಸಿದರು.

ಬೆಳಿಗ್ಗೆ ತಹಶೀಲ್ದಾರ್ ಬರುವುದೇ ಇಲ್ಲ,‌ ದೂರದ ಹಳ್ಳಿಗರ ಜನರಿಗೆ ತೊಂದರೆ ಆಗುತ್ತಿದೆ. ಸಂಜೆ‌ ಆರು ಗಂಟೆ ಮೇಲೆ ಬರುತ್ತಾರೆ ಎಂಬ ದೂರುಗಳು ಇವೆ. ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಆಗ ಡಾ.ನಯನಾ, ನಿತ್ಯ ಒಂದಿಲ್ಲೊಂದು ಸಭೆಗಳು ಇರುತ್ತವೆ. ಮುಖ್ಯಕಚೇರಿಯಲ್ಲಿ ಸಭೆ ಇರುತ್ತವೆ. ನ್ಯಾಯಾಲಯ ಪ್ರಕರಣಗಳಿರುತ್ತವೆ. ಅದಕ್ಕೆ ಹೋಗಬೇಕಾಗುತ್ತದೆ ಎಂದು ಸಮರ್ಥಿಸಿಕೊಳ್ಳಲು ಮುಂದಾದರು.

ತಹಶೀಲ್ದಾರ್ ಕಚೇರಿಯಲ್ಲಿ ವಾಸ್ತು ಸಮಸ್ಯೆ ಇದೆ. ಶೌಚಾಲಯ ಬದಲಾಯಿಸಿ. ಸಮಸ್ಯೆ ಸರಿ ಹೋಗಬಹುದು ಎಂದು ಶಾಸಕರು ಸಲಹೆ ನೀಡಿದರು.

ಸಭೆಯಲ್ಲಿ ಕಂದಾಯ ನಿರೀಕ್ಷಕ ರಾಜೇಂದ್ರ ಕುಮಾರ್, ವಿವಿಧ ವಿಭಾಗಗಳ ಸಿಬ್ಬಂದಿ ಹಾಗೂ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

5 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

6 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

11 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

12 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

1 day ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

1 day ago