Categories: ಕೋಲಾರ

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ತಿಂಗಳುಗಟ್ಟಲೆ, ವರ್ಷಗಟ್ಟಲೆ ಕಡತ ಇಟ್ಟುಕೊಂಡು ಏಕೆ‌ ಜನಸಾಮಾನ್ಯರನ್ನು, ರೈತರನ್ನು ಸತಾಯಿಸುತ್ತೀರಿ ಎಂದು ಪ್ರಶ್ನಿಸಿದರು.

ಕಾನೂನು ಪ್ರಕಾರವೇ ಕಡತ ವಿಲೇವಾರಿ ಮಾಡಿ. ಆದರೆ, ವರ್ಷಗಟ್ಟಲೇ ತಮ್ಮ ಬಳಿ ಕಡತಗಳನ್ನು ಇಟ್ಟುಕೊಳ್ಳುವ ಉದ್ದೇಶವಾದರೂ ಏನು? ಎಷ್ಟು ಕಡತಗಳು ತಮ್ಮ ಬಳಿ ವಿಲೇವಾರಿ ಆಗಲು ಬಾಕಿ ಇವೆ ಎಂದು ಕೇಳಿದ ಅವರು, ಮುಂದಿನ ಬುಧವಾರ ಮತ್ತೆ ಇಲ್ಲಿಗೆ ಭೇಟಿ ನೀಡುತ್ತೇನೆ. ಅಷ್ಟರಲ್ಲಿ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿರಬೇಕು ಇದು ಮನವಿ ಅಲ್ಲ ಗಡುವು ಎಂದರು.

ತಮಗೆ ಎಷ್ಟು ಹಣ ಬೇಕು ಹೇಳಿ, ನಾನೇ ಕೊಡುತ್ತೇನೆ?‌ ಆದರೆ, ಬಡಜನರ‌ನ್ನು ಪದೇಪದೇ ‌ ಕಚೇರಿಗೆ ಅಲೆಸದೆ ಕೆಲಸ ಮಾಡಿಕೊಡಿ. ನನ್ನ ಸ್ವಂತ ಕೆಲಸಕ್ಕೆಂದು ನಾನು ಯಾವತ್ತೂ ತಹಶೀಲ್ದಾರ್ ಕಚೇರಿಗೆ ‌ಬಂದಿಲ್ಲ ಪೋನು ಸಹ ಮಾಡಿಲ್ಲ ಆದರೆ ಸಾರ್ವಜನಿಕರ ಕೆಲಸ ವಿಳಂಬ ಮಾಡುತ್ತಿರುವ ಬಗ್ಗೆ ನನಗೆ ವಿಪರೀತ ದೂರುಗಳು ಬರುತ್ತಿವೆ. ರೈತರನ್ನು ಏಕೆ ಪದೇಪದೇ ಕಚೇರಿಗೆ ಅಲೆಸುತ್ತೀರಿ? ತಮ್ಮ ಟೇಬಲ್‌ಗೆ ಬರುವ ‌ಕಡತ‌ ಅಲ್ಲಿಂದ ಮುಂದೆ ಸಾಕಲು ಏಕೆ ವಿಳಂಬ ಮಾಡುತ್ತೀರಿ ಎಂದು ರೈತರು ಸಾಯಬೇಕು ಅವತ್ತು ಮಾಡಿಕೊಡತ್ತೀರ ಹೇಳಿ ಎಂದು ಅಧಿಕಾರಿಗಳ ವಿರುದ್ದ ಗರಂ ಆದರು.

ದ್ವಿತೀಯ ದರ್ಜೆ ಸಹಾಯಕಿಯರಾದ ಸುಜಾತಾ ಮತ್ತು ಚಾಮುಂಡೇಶ್ವರಿದೇವಿ ಬಳಿ ತೆರಳಿ ಹಳೆ ದಾಖಲೆಗಳನ್ನು ಜಾಲಾಡಿದರು. ಟೇಬಲ್‌ ಮೇಲೆ ರಾಶಿ ಕಡತ ಇಟ್ಟುಕೊಂಡು ಏನು ಮಾಡುತ್ತೀರಿ ಎಂದು ಕೇಳಿದರು. ಕೆಲವೊಂದು ದಾಖಲೆಗಳನ್ನು ಹುಡುಕಿ ಕೊಡಲು ಸಿಬ್ಬಂದಿ ಪರದಾಡಿದರು.

ಸರ್ವೆ ವಿಭಾಗ, ಟಪಾಲು ವಿಭಾಗ, ಡಿಜಿಟಲ್‌ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದ ಶಾಸಕರು ನಂತರ ಸಭಾಂಗಣದಲ್ಲಿ ತಹಶೀಲ್ದಾರ್‌ ಡಾ.ನಯನಾ ಹಾಗೂ ಇತರ ಅಧಿಕಾರಿಗಳ ಸಭೆ ನಡೆಸಿದರು.

ಪ್ರಮುಖವಾಗಿ ಸುಜಾತಾ ಹಾಗೂ ಸುಲೋಚನಾ ಅವರ ಮೇಲೆ ಹೆಚ್ಚು ದೂರುಗಳು ಬರುತ್ತಿವೆ. ಅವರನ್ನು ಮುಳಬಾಗಿಲಿಗೂ, ಶ್ರೀನಿವಾಸಪುರಕ್ಕೋ ವರ್ಗಾಯಿಸಲು ಜಿಲ್ಲಾಧಿಕಾರಿಗೆ ಹೇಳುತ್ತೇನೆ. ಸರ್ವೆ ವಿಭಾಗದ ಮೇಲೆ ಇರುವಷ್ಟು ದೂರು ಬೇರೆ ಎಲ್ಲೂ. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಇಲ್ಲಿಂದ ಹೊರಟುಬಿಡಿ. ಕೆಲಸ ಮಾಡದವರ ಹೆಸರು ಕೊಡಿ ಎಂದರು.

ಆಗ ತಹಶೀಲ್ದಾರ್‌ ನಯನಾ ಮಾತನಾಡಿ, ಸುಜಾತಾ ಅವರ ಕೆಲಸ ನಿಧಾನ. ಸುಲೋಚನಾ ಅವರ ಸಂಬಂಧ ಯಾವುದೇ ಭ್ರಷ್ಟಾಚಾರದ ದೂರುಗಳು ಇಲ್ಲ ಎಂದು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು ಹಾಗಾದರೆ ಯಾಕೆ ದೂರುಗಳು ಜಾಸ್ತಿ ಬರತ್ತೇವೆ ಹೇಳಿ ಎಂದು ಮರು ಪ್ರಶ್ನೆ ಹಾಕಿದರು.

‌ಸರ್ವೆ ಸಿಬ್ಬಂದಿ‌ ಕೊರತೆ ಇದ್ದು, ಕನಿಷ್ಠ ಇಬ್ಬರು ಸಿಬ್ಬಂದಿ ಬೇಕು ಎಂದು ಸರ್ವೆ ವಿಭಾಗದವರ ಆಗ್ರಹಿಸಿದರು.

ಡಾ.ನಯನಾ ವಿರುದ್ಧವೂ ದೂರುಗಳು ಬರುತ್ತಿರುವುದನ್ನು ಕೊತ್ತೂರು ಮಂಜುನಾಥ್‌ ಪ್ರಸ್ತಾಪಿಸಿದರು.

ಬೆಳಿಗ್ಗೆ ತಹಶೀಲ್ದಾರ್ ಬರುವುದೇ ಇಲ್ಲ,‌ ದೂರದ ಹಳ್ಳಿಗರ ಜನರಿಗೆ ತೊಂದರೆ ಆಗುತ್ತಿದೆ. ಸಂಜೆ‌ ಆರು ಗಂಟೆ ಮೇಲೆ ಬರುತ್ತಾರೆ ಎಂಬ ದೂರುಗಳು ಇವೆ. ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಆಗ ಡಾ.ನಯನಾ, ನಿತ್ಯ ಒಂದಿಲ್ಲೊಂದು ಸಭೆಗಳು ಇರುತ್ತವೆ. ಮುಖ್ಯಕಚೇರಿಯಲ್ಲಿ ಸಭೆ ಇರುತ್ತವೆ. ನ್ಯಾಯಾಲಯ ಪ್ರಕರಣಗಳಿರುತ್ತವೆ. ಅದಕ್ಕೆ ಹೋಗಬೇಕಾಗುತ್ತದೆ ಎಂದು ಸಮರ್ಥಿಸಿಕೊಳ್ಳಲು ಮುಂದಾದರು.

ತಹಶೀಲ್ದಾರ್ ಕಚೇರಿಯಲ್ಲಿ ವಾಸ್ತು ಸಮಸ್ಯೆ ಇದೆ. ಶೌಚಾಲಯ ಬದಲಾಯಿಸಿ. ಸಮಸ್ಯೆ ಸರಿ ಹೋಗಬಹುದು ಎಂದು ಶಾಸಕರು ಸಲಹೆ ನೀಡಿದರು.

ಸಭೆಯಲ್ಲಿ ಕಂದಾಯ ನಿರೀಕ್ಷಕ ರಾಜೇಂದ್ರ ಕುಮಾರ್, ವಿವಿಧ ವಿಭಾಗಗಳ ಸಿಬ್ಬಂದಿ ಹಾಗೂ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

4 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

4 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

9 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago