Categories: ಕೋಲಾರ

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ತಿಂಗಳುಗಟ್ಟಲೆ, ವರ್ಷಗಟ್ಟಲೆ ಕಡತ ಇಟ್ಟುಕೊಂಡು ಏಕೆ‌ ಜನಸಾಮಾನ್ಯರನ್ನು, ರೈತರನ್ನು ಸತಾಯಿಸುತ್ತೀರಿ ಎಂದು ಪ್ರಶ್ನಿಸಿದರು.

ಕಾನೂನು ಪ್ರಕಾರವೇ ಕಡತ ವಿಲೇವಾರಿ ಮಾಡಿ. ಆದರೆ, ವರ್ಷಗಟ್ಟಲೇ ತಮ್ಮ ಬಳಿ ಕಡತಗಳನ್ನು ಇಟ್ಟುಕೊಳ್ಳುವ ಉದ್ದೇಶವಾದರೂ ಏನು? ಎಷ್ಟು ಕಡತಗಳು ತಮ್ಮ ಬಳಿ ವಿಲೇವಾರಿ ಆಗಲು ಬಾಕಿ ಇವೆ ಎಂದು ಕೇಳಿದ ಅವರು, ಮುಂದಿನ ಬುಧವಾರ ಮತ್ತೆ ಇಲ್ಲಿಗೆ ಭೇಟಿ ನೀಡುತ್ತೇನೆ. ಅಷ್ಟರಲ್ಲಿ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿರಬೇಕು ಇದು ಮನವಿ ಅಲ್ಲ ಗಡುವು ಎಂದರು.

ತಮಗೆ ಎಷ್ಟು ಹಣ ಬೇಕು ಹೇಳಿ, ನಾನೇ ಕೊಡುತ್ತೇನೆ?‌ ಆದರೆ, ಬಡಜನರ‌ನ್ನು ಪದೇಪದೇ ‌ ಕಚೇರಿಗೆ ಅಲೆಸದೆ ಕೆಲಸ ಮಾಡಿಕೊಡಿ. ನನ್ನ ಸ್ವಂತ ಕೆಲಸಕ್ಕೆಂದು ನಾನು ಯಾವತ್ತೂ ತಹಶೀಲ್ದಾರ್ ಕಚೇರಿಗೆ ‌ಬಂದಿಲ್ಲ ಪೋನು ಸಹ ಮಾಡಿಲ್ಲ ಆದರೆ ಸಾರ್ವಜನಿಕರ ಕೆಲಸ ವಿಳಂಬ ಮಾಡುತ್ತಿರುವ ಬಗ್ಗೆ ನನಗೆ ವಿಪರೀತ ದೂರುಗಳು ಬರುತ್ತಿವೆ. ರೈತರನ್ನು ಏಕೆ ಪದೇಪದೇ ಕಚೇರಿಗೆ ಅಲೆಸುತ್ತೀರಿ? ತಮ್ಮ ಟೇಬಲ್‌ಗೆ ಬರುವ ‌ಕಡತ‌ ಅಲ್ಲಿಂದ ಮುಂದೆ ಸಾಕಲು ಏಕೆ ವಿಳಂಬ ಮಾಡುತ್ತೀರಿ ಎಂದು ರೈತರು ಸಾಯಬೇಕು ಅವತ್ತು ಮಾಡಿಕೊಡತ್ತೀರ ಹೇಳಿ ಎಂದು ಅಧಿಕಾರಿಗಳ ವಿರುದ್ದ ಗರಂ ಆದರು.

ದ್ವಿತೀಯ ದರ್ಜೆ ಸಹಾಯಕಿಯರಾದ ಸುಜಾತಾ ಮತ್ತು ಚಾಮುಂಡೇಶ್ವರಿದೇವಿ ಬಳಿ ತೆರಳಿ ಹಳೆ ದಾಖಲೆಗಳನ್ನು ಜಾಲಾಡಿದರು. ಟೇಬಲ್‌ ಮೇಲೆ ರಾಶಿ ಕಡತ ಇಟ್ಟುಕೊಂಡು ಏನು ಮಾಡುತ್ತೀರಿ ಎಂದು ಕೇಳಿದರು. ಕೆಲವೊಂದು ದಾಖಲೆಗಳನ್ನು ಹುಡುಕಿ ಕೊಡಲು ಸಿಬ್ಬಂದಿ ಪರದಾಡಿದರು.

ಸರ್ವೆ ವಿಭಾಗ, ಟಪಾಲು ವಿಭಾಗ, ಡಿಜಿಟಲ್‌ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದ ಶಾಸಕರು ನಂತರ ಸಭಾಂಗಣದಲ್ಲಿ ತಹಶೀಲ್ದಾರ್‌ ಡಾ.ನಯನಾ ಹಾಗೂ ಇತರ ಅಧಿಕಾರಿಗಳ ಸಭೆ ನಡೆಸಿದರು.

ಪ್ರಮುಖವಾಗಿ ಸುಜಾತಾ ಹಾಗೂ ಸುಲೋಚನಾ ಅವರ ಮೇಲೆ ಹೆಚ್ಚು ದೂರುಗಳು ಬರುತ್ತಿವೆ. ಅವರನ್ನು ಮುಳಬಾಗಿಲಿಗೂ, ಶ್ರೀನಿವಾಸಪುರಕ್ಕೋ ವರ್ಗಾಯಿಸಲು ಜಿಲ್ಲಾಧಿಕಾರಿಗೆ ಹೇಳುತ್ತೇನೆ. ಸರ್ವೆ ವಿಭಾಗದ ಮೇಲೆ ಇರುವಷ್ಟು ದೂರು ಬೇರೆ ಎಲ್ಲೂ. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಇಲ್ಲಿಂದ ಹೊರಟುಬಿಡಿ. ಕೆಲಸ ಮಾಡದವರ ಹೆಸರು ಕೊಡಿ ಎಂದರು.

ಆಗ ತಹಶೀಲ್ದಾರ್‌ ನಯನಾ ಮಾತನಾಡಿ, ಸುಜಾತಾ ಅವರ ಕೆಲಸ ನಿಧಾನ. ಸುಲೋಚನಾ ಅವರ ಸಂಬಂಧ ಯಾವುದೇ ಭ್ರಷ್ಟಾಚಾರದ ದೂರುಗಳು ಇಲ್ಲ ಎಂದು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು ಹಾಗಾದರೆ ಯಾಕೆ ದೂರುಗಳು ಜಾಸ್ತಿ ಬರತ್ತೇವೆ ಹೇಳಿ ಎಂದು ಮರು ಪ್ರಶ್ನೆ ಹಾಕಿದರು.

‌ಸರ್ವೆ ಸಿಬ್ಬಂದಿ‌ ಕೊರತೆ ಇದ್ದು, ಕನಿಷ್ಠ ಇಬ್ಬರು ಸಿಬ್ಬಂದಿ ಬೇಕು ಎಂದು ಸರ್ವೆ ವಿಭಾಗದವರ ಆಗ್ರಹಿಸಿದರು.

ಡಾ.ನಯನಾ ವಿರುದ್ಧವೂ ದೂರುಗಳು ಬರುತ್ತಿರುವುದನ್ನು ಕೊತ್ತೂರು ಮಂಜುನಾಥ್‌ ಪ್ರಸ್ತಾಪಿಸಿದರು.

ಬೆಳಿಗ್ಗೆ ತಹಶೀಲ್ದಾರ್ ಬರುವುದೇ ಇಲ್ಲ,‌ ದೂರದ ಹಳ್ಳಿಗರ ಜನರಿಗೆ ತೊಂದರೆ ಆಗುತ್ತಿದೆ. ಸಂಜೆ‌ ಆರು ಗಂಟೆ ಮೇಲೆ ಬರುತ್ತಾರೆ ಎಂಬ ದೂರುಗಳು ಇವೆ. ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಆಗ ಡಾ.ನಯನಾ, ನಿತ್ಯ ಒಂದಿಲ್ಲೊಂದು ಸಭೆಗಳು ಇರುತ್ತವೆ. ಮುಖ್ಯಕಚೇರಿಯಲ್ಲಿ ಸಭೆ ಇರುತ್ತವೆ. ನ್ಯಾಯಾಲಯ ಪ್ರಕರಣಗಳಿರುತ್ತವೆ. ಅದಕ್ಕೆ ಹೋಗಬೇಕಾಗುತ್ತದೆ ಎಂದು ಸಮರ್ಥಿಸಿಕೊಳ್ಳಲು ಮುಂದಾದರು.

ತಹಶೀಲ್ದಾರ್ ಕಚೇರಿಯಲ್ಲಿ ವಾಸ್ತು ಸಮಸ್ಯೆ ಇದೆ. ಶೌಚಾಲಯ ಬದಲಾಯಿಸಿ. ಸಮಸ್ಯೆ ಸರಿ ಹೋಗಬಹುದು ಎಂದು ಶಾಸಕರು ಸಲಹೆ ನೀಡಿದರು.

ಸಭೆಯಲ್ಲಿ ಕಂದಾಯ ನಿರೀಕ್ಷಕ ರಾಜೇಂದ್ರ ಕುಮಾರ್, ವಿವಿಧ ವಿಭಾಗಗಳ ಸಿಬ್ಬಂದಿ ಹಾಗೂ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

14 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

17 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago