Categories: ಕೋಲಾರ

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ತಿಂಗಳುಗಟ್ಟಲೆ, ವರ್ಷಗಟ್ಟಲೆ ಕಡತ ಇಟ್ಟುಕೊಂಡು ಏಕೆ‌ ಜನಸಾಮಾನ್ಯರನ್ನು, ರೈತರನ್ನು ಸತಾಯಿಸುತ್ತೀರಿ ಎಂದು ಪ್ರಶ್ನಿಸಿದರು.

ಕಾನೂನು ಪ್ರಕಾರವೇ ಕಡತ ವಿಲೇವಾರಿ ಮಾಡಿ. ಆದರೆ, ವರ್ಷಗಟ್ಟಲೇ ತಮ್ಮ ಬಳಿ ಕಡತಗಳನ್ನು ಇಟ್ಟುಕೊಳ್ಳುವ ಉದ್ದೇಶವಾದರೂ ಏನು? ಎಷ್ಟು ಕಡತಗಳು ತಮ್ಮ ಬಳಿ ವಿಲೇವಾರಿ ಆಗಲು ಬಾಕಿ ಇವೆ ಎಂದು ಕೇಳಿದ ಅವರು, ಮುಂದಿನ ಬುಧವಾರ ಮತ್ತೆ ಇಲ್ಲಿಗೆ ಭೇಟಿ ನೀಡುತ್ತೇನೆ. ಅಷ್ಟರಲ್ಲಿ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಿರಬೇಕು ಇದು ಮನವಿ ಅಲ್ಲ ಗಡುವು ಎಂದರು.

ತಮಗೆ ಎಷ್ಟು ಹಣ ಬೇಕು ಹೇಳಿ, ನಾನೇ ಕೊಡುತ್ತೇನೆ?‌ ಆದರೆ, ಬಡಜನರ‌ನ್ನು ಪದೇಪದೇ ‌ ಕಚೇರಿಗೆ ಅಲೆಸದೆ ಕೆಲಸ ಮಾಡಿಕೊಡಿ. ನನ್ನ ಸ್ವಂತ ಕೆಲಸಕ್ಕೆಂದು ನಾನು ಯಾವತ್ತೂ ತಹಶೀಲ್ದಾರ್ ಕಚೇರಿಗೆ ‌ಬಂದಿಲ್ಲ ಪೋನು ಸಹ ಮಾಡಿಲ್ಲ ಆದರೆ ಸಾರ್ವಜನಿಕರ ಕೆಲಸ ವಿಳಂಬ ಮಾಡುತ್ತಿರುವ ಬಗ್ಗೆ ನನಗೆ ವಿಪರೀತ ದೂರುಗಳು ಬರುತ್ತಿವೆ. ರೈತರನ್ನು ಏಕೆ ಪದೇಪದೇ ಕಚೇರಿಗೆ ಅಲೆಸುತ್ತೀರಿ? ತಮ್ಮ ಟೇಬಲ್‌ಗೆ ಬರುವ ‌ಕಡತ‌ ಅಲ್ಲಿಂದ ಮುಂದೆ ಸಾಕಲು ಏಕೆ ವಿಳಂಬ ಮಾಡುತ್ತೀರಿ ಎಂದು ರೈತರು ಸಾಯಬೇಕು ಅವತ್ತು ಮಾಡಿಕೊಡತ್ತೀರ ಹೇಳಿ ಎಂದು ಅಧಿಕಾರಿಗಳ ವಿರುದ್ದ ಗರಂ ಆದರು.

ದ್ವಿತೀಯ ದರ್ಜೆ ಸಹಾಯಕಿಯರಾದ ಸುಜಾತಾ ಮತ್ತು ಚಾಮುಂಡೇಶ್ವರಿದೇವಿ ಬಳಿ ತೆರಳಿ ಹಳೆ ದಾಖಲೆಗಳನ್ನು ಜಾಲಾಡಿದರು. ಟೇಬಲ್‌ ಮೇಲೆ ರಾಶಿ ಕಡತ ಇಟ್ಟುಕೊಂಡು ಏನು ಮಾಡುತ್ತೀರಿ ಎಂದು ಕೇಳಿದರು. ಕೆಲವೊಂದು ದಾಖಲೆಗಳನ್ನು ಹುಡುಕಿ ಕೊಡಲು ಸಿಬ್ಬಂದಿ ಪರದಾಡಿದರು.

ಸರ್ವೆ ವಿಭಾಗ, ಟಪಾಲು ವಿಭಾಗ, ಡಿಜಿಟಲ್‌ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದ ಶಾಸಕರು ನಂತರ ಸಭಾಂಗಣದಲ್ಲಿ ತಹಶೀಲ್ದಾರ್‌ ಡಾ.ನಯನಾ ಹಾಗೂ ಇತರ ಅಧಿಕಾರಿಗಳ ಸಭೆ ನಡೆಸಿದರು.

ಪ್ರಮುಖವಾಗಿ ಸುಜಾತಾ ಹಾಗೂ ಸುಲೋಚನಾ ಅವರ ಮೇಲೆ ಹೆಚ್ಚು ದೂರುಗಳು ಬರುತ್ತಿವೆ. ಅವರನ್ನು ಮುಳಬಾಗಿಲಿಗೂ, ಶ್ರೀನಿವಾಸಪುರಕ್ಕೋ ವರ್ಗಾಯಿಸಲು ಜಿಲ್ಲಾಧಿಕಾರಿಗೆ ಹೇಳುತ್ತೇನೆ. ಸರ್ವೆ ವಿಭಾಗದ ಮೇಲೆ ಇರುವಷ್ಟು ದೂರು ಬೇರೆ ಎಲ್ಲೂ. ಕೆಲಸ ಮಾಡಲು ಸಾಧ್ಯವಾಗದಿದ್ದರೆ ಇಲ್ಲಿಂದ ಹೊರಟುಬಿಡಿ. ಕೆಲಸ ಮಾಡದವರ ಹೆಸರು ಕೊಡಿ ಎಂದರು.

ಆಗ ತಹಶೀಲ್ದಾರ್‌ ನಯನಾ ಮಾತನಾಡಿ, ಸುಜಾತಾ ಅವರ ಕೆಲಸ ನಿಧಾನ. ಸುಲೋಚನಾ ಅವರ ಸಂಬಂಧ ಯಾವುದೇ ಭ್ರಷ್ಟಾಚಾರದ ದೂರುಗಳು ಇಲ್ಲ ಎಂದು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು ಹಾಗಾದರೆ ಯಾಕೆ ದೂರುಗಳು ಜಾಸ್ತಿ ಬರತ್ತೇವೆ ಹೇಳಿ ಎಂದು ಮರು ಪ್ರಶ್ನೆ ಹಾಕಿದರು.

‌ಸರ್ವೆ ಸಿಬ್ಬಂದಿ‌ ಕೊರತೆ ಇದ್ದು, ಕನಿಷ್ಠ ಇಬ್ಬರು ಸಿಬ್ಬಂದಿ ಬೇಕು ಎಂದು ಸರ್ವೆ ವಿಭಾಗದವರ ಆಗ್ರಹಿಸಿದರು.

ಡಾ.ನಯನಾ ವಿರುದ್ಧವೂ ದೂರುಗಳು ಬರುತ್ತಿರುವುದನ್ನು ಕೊತ್ತೂರು ಮಂಜುನಾಥ್‌ ಪ್ರಸ್ತಾಪಿಸಿದರು.

ಬೆಳಿಗ್ಗೆ ತಹಶೀಲ್ದಾರ್ ಬರುವುದೇ ಇಲ್ಲ,‌ ದೂರದ ಹಳ್ಳಿಗರ ಜನರಿಗೆ ತೊಂದರೆ ಆಗುತ್ತಿದೆ. ಸಂಜೆ‌ ಆರು ಗಂಟೆ ಮೇಲೆ ಬರುತ್ತಾರೆ ಎಂಬ ದೂರುಗಳು ಇವೆ. ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಆಗ ಡಾ.ನಯನಾ, ನಿತ್ಯ ಒಂದಿಲ್ಲೊಂದು ಸಭೆಗಳು ಇರುತ್ತವೆ. ಮುಖ್ಯಕಚೇರಿಯಲ್ಲಿ ಸಭೆ ಇರುತ್ತವೆ. ನ್ಯಾಯಾಲಯ ಪ್ರಕರಣಗಳಿರುತ್ತವೆ. ಅದಕ್ಕೆ ಹೋಗಬೇಕಾಗುತ್ತದೆ ಎಂದು ಸಮರ್ಥಿಸಿಕೊಳ್ಳಲು ಮುಂದಾದರು.

ತಹಶೀಲ್ದಾರ್ ಕಚೇರಿಯಲ್ಲಿ ವಾಸ್ತು ಸಮಸ್ಯೆ ಇದೆ. ಶೌಚಾಲಯ ಬದಲಾಯಿಸಿ. ಸಮಸ್ಯೆ ಸರಿ ಹೋಗಬಹುದು ಎಂದು ಶಾಸಕರು ಸಲಹೆ ನೀಡಿದರು.

ಸಭೆಯಲ್ಲಿ ಕಂದಾಯ ನಿರೀಕ್ಷಕ ರಾಜೇಂದ್ರ ಕುಮಾರ್, ವಿವಿಧ ವಿಭಾಗಗಳ ಸಿಬ್ಬಂದಿ ಹಾಗೂ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

9 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

19 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

21 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 days ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

2 days ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago