
ದೊಡ್ಡಬಳ್ಳಾಪುರ ತಾಲೂಕಿನ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆಯ ಮುಕ್ತಾರ್ ಪಾಷಾ ಹೆಚ್.ಜಿ. ಆದೇಶಿಸಿದ್ದಾರೆ.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರಾಯಚೂರು ಮಹಾನಗರ ಪಾಲಿಕೆ ಕಂದಾಯ ಅಧಿಕಾರಿಯಾಗಿದ್ದ ಮಲ್ಲಪ್ಪ ಅವರನ್ನು ನೇಮಿಸಲಾಗಿದೆ.
ಸದ್ಯ ಆದೇಶ ಪತ್ರದಲ್ಲಿ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರಿಗೆ ಯಾವುದೇ ಸ್ಥಾನ ಸೂಚಿಸಿಲ್ಲ.