ತಹಶೀಲ್ದಾರ್ ಹೆಸರಿನ ನಕಲಿ ಸಹಿ ಬಳಸಿ ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣ ದೋಖಾ: ತಹಶೀಲ್ದಾರ್ ಸಮಯ ಪ್ರಜ್ಞೆಯಿಂದ ದೂರು ದಾಖಲು: ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು: ಮುಂದುವರಿದ ತನಿಖೆ

 

ದೊಡ್ಡಬಳ್ಳಾಪುರ ತಹಶೀಲ್ದಾ‌ರ್ ಹಾಗೂ ಕೇಸ್ ವರ್ಕರ್ ಹೆಸರಿನ ನಕಲಿ ಸಹಿ ಬಳಸಿ ಮುಜರಾಯಿ ಇಲಾಖೆಯ ಲಕ್ಷ ಲಕ್ಷ ಹಣವನ್ನು ದೋಖಾ ಮಾಡಿರುವ ಆರೋಪದ ಮೇಲೆ‌ ಸಾಸಲು ಹೋಬಳಿ ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್‌ ನನ್ನು ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.

ಮುಜರಾಯಿ ಇಲಾಖೆ ಎಫ್‌ಡಿಎ ಕರ್ತವ್ಯದಿಂದ ಸಾಸಲು ಹೋಬಳಿ ಆರ್ ಐ ಆಗಿ ವರ್ಗಾವಣೆ ಆದ ಬಳಿಕ ಹೇಮಂತ್ ಕುಮಾರ್ ಅವರು ದಾಖಲೆಗಳನ್ನು ನೀಡುವ ವೇಳೆ ಚೆಕ್‌ ಬುಕ್ ಗಳನ್ನು ನೀಡದೆ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬಳಿಕ ಹಲವು ಕಂತುಗಳಲ್ಲಿ ತಹಶಿಲ್ದಾರ್ ಅವರ ನಕಲಿ ಸಹಿ ಬಳಸಿ ಲಕ್ಷ ಲಕ್ಷ ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ನಡೆಸಿದ್ದಾರೆ ಎನ್ನಲಾಗಿದೆ.

ಕೂಡಲೇ ಎಚ್ಚೆತ್ತ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ದಿನಾಂಕ 11-2-2025ರಂದು ದೂರು ದಾಖಲು ಮಾಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು, ಹಣವನ್ನು ದೋಖಾ ಮಾಡಿರುವ ಆರೋಪದ ಮೇಲೆ‌ ಸಾಸಲು ಹೋಬಳಿ ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್‌ ನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ದೊಡ್ಡಬಳ್ಳಾಪುರ ತಹಶೀಲ್ದಾರ್ ಹೆಸರಿನಲ್ಲಿರುವ ಎಸ್.ಬಿ.ಐ ಬ್ಯಾಂಕ್ ದೊಡ್ಡಬಳ್ಳಾಪುರ ಮುಜರಾಯಿ ಶಾಖೆಗೆ ಸೇರಿದ ಉಳಿತಾಯ ಖಾತೆ ಸಂಖ್ಯೆಯಲ್ಲಿ ತಹಶೀಲ್ದಾರ್ ಗಮನಕ್ಕೆ ಬಾರದೆ ದಿನಾಂಕ 18/05/2023 ರಿಂದ 11/02/2025 ರವರೆಗೆ ನಕಲಿ ದಾಖಲೆ ಸೃಷ್ಟಿಸಿ ಹಣ ವರ್ಗಾವಣೆ ಮಾಡಿರುವುದು ಕಂಡು ಬಂದಿರುತ್ತದೆ. ಅದರಂತೆ ಈ ವಿಚಾರವಾಗಿ ಎಸ್.ಬಿ.ಐ ಬ್ಯಾಂಕ್ ನ ವ್ಯವಸ್ಥಾಪಕರನ್ನು ಸಂಪರ್ಕಿಸಲಾಗಿ ದಾಖಲೆಗಳನ್ನು ಪಡೆದು ಪರಿಶೀಲಿಸಲಾಗಿ ಸದರಿ ಖಾತೆಯ ಚೆಕ್ ಗಳನ್ನು ಬಳಸಿಕೊಂಡು ತಹಶೀಲ್ದಾರ್ ಅವರ ಸಹಿಯನ್ನು ನಕಲು ಮಾಡಿ ಸದರಿ ಖಾತೆಯಿಂದ ಹಣವನ್ನು ಅಕ್ರಮವಾಗಿ ವಿವಿಧ ಹೆಸರಿನ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಆಗಿರುವುದು ಕಂಡು ಬಂದಿರುತ್ತದೆ. ಆದ್ದರಿಂದ, ಈ ವಿಷಯದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಂಡು ದೋಖಾ ಆಗಿರುವ ಹಣವನ್ನು ಹಿಂತಿರುಗಿಸಿ ನೀಡಬೇಕೆಂದು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರು ತಿಳಿಸಿದ್ದಾರೆ.

ಸತ್ತ ಮಹಿಳೆಯ ಹೆಸರಿಗೆ ಹಣ ವರ್ಗಾವಣೆ

ನಕಲಿ ಸಹಿ ಬಳಸಿದ್ದ ಚೆಕ್ ಗಳನ್ನು ಬೆಂಗಳೂರಿನ ಮೃತಪಟ್ಟಿರುವ ಮಹಿಳೆಯೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದು, ಆ ಮಹಿಳೆ ಕಳೆದ ಎಂಟು ತಿಂಗಳ ಹಿಂದೆಯೇ ಮೃತಪಟ್ಟಿದ್ದು, ಮೊಮ್ಮಗನ ಬಳಿ ಬ್ಯಾಂಕ್ ದಾಖಲೆ, ಮೊಬೈಲ್, ಸಿಮ್ ಪಡೆದುಕೊಂಡು ಹಂತ ಹಂತವಾಗಿ ಹಣವನ್ನು ಡ್ರಾ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಒಮ್ಮೆ ಹಣ ಡ್ರಾ ಮಾಡಲು ಕಂದಾಯ ನಿರೀಕ್ಷಕ (RI) ಹೇಮಂತ್ ಕುಮಾರ್‌ ತನ್ನ ಪತ್ನಿಯನ್ನೇ ಬ್ಯಾಂಕ್ ಗೆ ಕಳುಹಿಸಿ ಹಣ ಡ್ರಾ ಮಾಡಿಕೊಂಡಿರುವ ದೃಶ್ಯ ಬ್ಯಾಂಕ್ ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಆಕೆ ಕೂಡ ಪೊಲೀಸ್ ತನಿಖೆಯಲ್ಲಿ ಒಪ್ಪಿಕೊಂಡಿರುವ ಮಾಹಿತಿ ಒದಗಿಬಂದಿದೆ.

ಮನೆಯಲ್ಲಿ ಸೀಲ್ ಹಾಗೂ ಚೆಕ್ ಗಳು ಪತ್ತೆ

ಪೊಲೀಸ್ ತನಿಖೆ ವೇಳೆ ಮನೆಯಲ್ಲಿ ನಕಲಿ ಆಧಾರ್ ಕಾರ್ಡ್, ನಕಲಿ ಸಿಮ್, ಸೀಲ್, ಸಹಿ ಸೇರಿದಂತೆ ಇತರೆ ವಸ್ತುಗಳು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ..

ಆನ್ ಲೈನ್ ಗೇಮ್ ಗೂ ಹಣ ಬಳಕೆ

ಈತ ಈ ದೋಖಾ ಮಾಡಿದ ಹಣದಲ್ಲಿ 10 ಲಕ್ಷ ರೂ. ಕೊಟ್ಟು ಒಡವೆ ಖರೀದಿ, ದೊಡ್ಡಬಳ್ಳಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸ, ಮನೆಯೊಂದನ್ನು ದುರಸ್ತಿ ಮಾಡಲು 30 ಲಕ್ಷ‌ ಖರ್ಚು ಮಾಡಿರುವುದಲ್ಲದೇ ಆನ್ ಲೈನ್ ಗೇಮ್ ಗೂ ಹಣ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 hours ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

12 hours ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

14 hours ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

14 hours ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

1 day ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

1 day ago