ಕೋಲಾರ:- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿರುವ ಅಧಿಕಾರಿಗಳು ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿರುವುದು ನಾಚಿಗೇಡಿನ ಸಂಗತಿಯಾಗಿದ್ದು, ಪ್ರಾಮಾಣಿಕ ಅಧಿಕಾರಿಯಾಗಿದ್ದ ವೆಂಕಟೇಶಪ್ಪ ವರ್ಗಾವಣೆಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೈವಾಡವಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.
ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಇಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಬೆಲೆಯಿಲ್ಲ. ರಾಜಕೀಯಕ್ಕೆ ಮಣಿದು ಕೆಲಸ ಮಾಡುವವರಿಗೆ ಮಾತ್ರ ಸ್ಥಾನವೇ ಎಂದು ಪ್ರಶ್ನಿಸಿದರು.
ಹಿಂದೆ ದಯಾನಂದ್ ತಹಶೀಲ್ದಾರ್ ಆಗಿದ್ದಾಗ ಸಾರ್ವಜನಿಕರ ಕೆಲಸ ಮಾಡಲು ರಾಜಕೀಯ ಮುಖಂಡರು ಬಿಡಲಿಲ್ಲ. ಸರ್ಕಾರಿ ಜಮೀನುಗಳನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದನ್ನು ಬಯಲಿಗೇಳೆದ ಕಾರಣದಿಂದ ಮಾನಸಿಕವಾಗಿ ಕಿರುಕುಳ ನೀಡಿ ಎತ್ತಂಗಡಿ ಮಾಡಿದರು. ಈಗ ವೆಂಕಟೇಶಪ್ಪ ಅವರಿಗೂ ಅದೇ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ವೆಂಕಟೇಶಪ್ಪ ಅವರು ಬಂಗಾರಪೇಟೆ ತಾಲೂಕಿನ ಎಸ್.ಎನ್ ಸಿಟಿ ಬಡಾವಣೆ ನಿರ್ಮಾಣಕ್ಕೆ ಸರ್ಕಾರಿ ಜಾಗ ಒತ್ತುವರಿಯಾಗಿರುವುದನ್ನು ಕಂಡು ಹಿಡಿದು ಸರ್ಕಾರಕ್ಕೆ ವರದಿ ಸಲ್ಲಿಸಿದರು. ಇದನ್ನೆ ನೆಪವಾಗಿ ಇಟ್ಟುಕೊಂಡು ಸಾರ್ವಜನಿಕ ವಲಯದಲ್ಲಿ ಟೀಕೆ ಮಾಡಿ, ಸರ್ಕಾರದ ಮೇಲೆ ಒತ್ತಡ ತಂದು ಅವಧಿಗೂ ಮುಂಚೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ವರ್ಗಾವಣೆ ಮಾಡಿಸಿದ್ದಾರೆ ಎಂದು ದೂರಿದರು.
ಜನಪ್ರತಿನಿಧಿಗಳ ತಾಳಕ್ಕೆ ಕುಣಿಯಲು ಅಧಿಕಾರಿಗಳದೇನು ತಾತ್ಕಾಲಿಕ ಹುದ್ದೆಯಲ್ಲ, ಸಾರ್ವಜಕರ ಸಮಸ್ಯೆಗಳಿಗೆ ಸ್ಪಂದಿಸುವ, ಸರ್ಕಾರಿ ಅಸ್ತಿಗಳನ್ನು ಉಳಿಸಿವ ಮಹತ್ತರವಾದ ಜವಾಬ್ದಾರಿ ಇದೆ. ಸ್ವಾತಂತ್ರವಾಗಿ ಕೆಲಸ ಮಾಡಲು ಜನಪ್ರತಿನಿಧಿಗಳು ಅವಕಾಶ ನೀಡಬೇಕು ಸಲಹೆ ನೀಡಿದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…