ಕೋಲಾರ:- ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿರುವ ಅಧಿಕಾರಿಗಳು ಕುರ್ಚಿಗಾಗಿ ಕಿತ್ತಾಟ ನಡೆಸುತ್ತಿರುವುದು ನಾಚಿಗೇಡಿನ ಸಂಗತಿಯಾಗಿದ್ದು, ಪ್ರಾಮಾಣಿಕ ಅಧಿಕಾರಿಯಾಗಿದ್ದ ವೆಂಕಟೇಶಪ್ಪ ವರ್ಗಾವಣೆಯಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೈವಾಡವಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.
ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಇಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಬೆಲೆಯಿಲ್ಲ. ರಾಜಕೀಯಕ್ಕೆ ಮಣಿದು ಕೆಲಸ ಮಾಡುವವರಿಗೆ ಮಾತ್ರ ಸ್ಥಾನವೇ ಎಂದು ಪ್ರಶ್ನಿಸಿದರು.
ಹಿಂದೆ ದಯಾನಂದ್ ತಹಶೀಲ್ದಾರ್ ಆಗಿದ್ದಾಗ ಸಾರ್ವಜನಿಕರ ಕೆಲಸ ಮಾಡಲು ರಾಜಕೀಯ ಮುಖಂಡರು ಬಿಡಲಿಲ್ಲ. ಸರ್ಕಾರಿ ಜಮೀನುಗಳನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದನ್ನು ಬಯಲಿಗೇಳೆದ ಕಾರಣದಿಂದ ಮಾನಸಿಕವಾಗಿ ಕಿರುಕುಳ ನೀಡಿ ಎತ್ತಂಗಡಿ ಮಾಡಿದರು. ಈಗ ವೆಂಕಟೇಶಪ್ಪ ಅವರಿಗೂ ಅದೇ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ವೆಂಕಟೇಶಪ್ಪ ಅವರು ಬಂಗಾರಪೇಟೆ ತಾಲೂಕಿನ ಎಸ್.ಎನ್ ಸಿಟಿ ಬಡಾವಣೆ ನಿರ್ಮಾಣಕ್ಕೆ ಸರ್ಕಾರಿ ಜಾಗ ಒತ್ತುವರಿಯಾಗಿರುವುದನ್ನು ಕಂಡು ಹಿಡಿದು ಸರ್ಕಾರಕ್ಕೆ ವರದಿ ಸಲ್ಲಿಸಿದರು. ಇದನ್ನೆ ನೆಪವಾಗಿ ಇಟ್ಟುಕೊಂಡು ಸಾರ್ವಜನಿಕ ವಲಯದಲ್ಲಿ ಟೀಕೆ ಮಾಡಿ, ಸರ್ಕಾರದ ಮೇಲೆ ಒತ್ತಡ ತಂದು ಅವಧಿಗೂ ಮುಂಚೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ವರ್ಗಾವಣೆ ಮಾಡಿಸಿದ್ದಾರೆ ಎಂದು ದೂರಿದರು.
ಜನಪ್ರತಿನಿಧಿಗಳ ತಾಳಕ್ಕೆ ಕುಣಿಯಲು ಅಧಿಕಾರಿಗಳದೇನು ತಾತ್ಕಾಲಿಕ ಹುದ್ದೆಯಲ್ಲ, ಸಾರ್ವಜಕರ ಸಮಸ್ಯೆಗಳಿಗೆ ಸ್ಪಂದಿಸುವ, ಸರ್ಕಾರಿ ಅಸ್ತಿಗಳನ್ನು ಉಳಿಸಿವ ಮಹತ್ತರವಾದ ಜವಾಬ್ದಾರಿ ಇದೆ. ಸ್ವಾತಂತ್ರವಾಗಿ ಕೆಲಸ ಮಾಡಲು ಜನಪ್ರತಿನಿಧಿಗಳು ಅವಕಾಶ ನೀಡಬೇಕು ಸಲಹೆ ನೀಡಿದರು.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…