Categories: ಉಡುಪಿ

ತಾಯಿಯ ಆಸೆಯನ್ನು ಈಡೇರಿಸಿದ ಯಂಗ್ ಟೈಗರ್ ಜೂನಿಯರ್ ಎನ್ ಟಿಆರ್(Jr NTR): ತಾಯಿಯ ಆಸೆ ಏನು..? ಇಂದು ಅವರು ಯಾವ ಮಠಕ್ಕೆ ಭೇಟಿ‌ ಕೊಟ್ಟಿದ್ದರು…? ಇಲ್ಲಿದೆ ಮಾಹಿತಿ…

ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ (Jr NTR) ಅವರು ತಮ್ಮ ತಾಯಿ ಶಾಲಿನಿ ನಂದಾಮುರಿ ಅವರ ಜೊತೆ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.

ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ, ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.

ಶಾಲಿನಿ ನಂದಮುರಿ ಅವರು 40 ವರ್ಷಗಳ ಹಿಂದೆ ಪುತ್ರನನ್ನು ಉಡುಪಿ ಶ್ರೀ ಕೃಷ್ಣ ದೇವರ ದರ್ಶನಕ್ಕೆ ಕರೆದುಕೊಂಡು ಬರಬೇಕು ಎಂಬ ಕನಸು ಕಂಡಿದ್ದರಂತೆ. ಇಂದು ಆ ಆಸೆ ಈಡೇರಿದೆ. ಜೂನಿಯರ್ ಎನ್‌ಟಿಆರ್ ತನ್ನ ತಾಯಿ ಶಾಲಿನಿ ಅವರೊಂದಿಗೆ ತನ್ನ ತವರು ಕುಂದಾಪುರಕ್ಕೆ ತೆರಳಿದ್ದರು. ಬಳಿಕ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು

ಈ ಬಗ್ಗೆ ಎನ್‌ಟಿಆರ್ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದರ್ಶನ ಪಡೆಯಲು ಹುಟ್ಟೂರು ಕುಂದಾಪುರಕ್ಕೆ ನನ್ನನ್ನು ಕರೆತರುವ ನನ್ನ ತಾಯಿಯ ಕನಸು ಕೊನೆಗೂ ನನಸಾಗಿದೆ!  ಸೆಪ್ಟೆಂಬರ್ 2 ರಂದು ಅವರ ಜನ್ಮದಿನದ ಮೊದಲು ಅದನ್ನು ನೆರವೇರಿಸುವುದು ನಾನು ಅವಳಿಗೆ ನೀಡಬಹುದಾದ ಅತ್ಯುತ್ತಮ ಕೊಡುಗೆಯಾಗಿದೆ ಎಂದು ಎನ್‌ಟಿಆರ್ ಬರೆದಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಟ ರಿಷಬ್ ಶೆಟ್ಟಿ ಕೂಡ ಅವರೊಂದಿಗೆ ಇದ್ದಾರೆ. ಈ ಫೋಟೋಗಳು ಇದೀಗ ವೈರಲ್ ಆಗಿವೆ.

Ramesh Babu

Journalist

Share
Published by
Ramesh Babu

Recent Posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

2 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

3 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

12 hours ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

1 day ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

1 day ago

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

1 day ago