Categories: ಉಡುಪಿ

ತಾಯಿಯ ಆಸೆಯನ್ನು ಈಡೇರಿಸಿದ ಯಂಗ್ ಟೈಗರ್ ಜೂನಿಯರ್ ಎನ್ ಟಿಆರ್(Jr NTR): ತಾಯಿಯ ಆಸೆ ಏನು..? ಇಂದು ಅವರು ಯಾವ ಮಠಕ್ಕೆ ಭೇಟಿ‌ ಕೊಟ್ಟಿದ್ದರು…? ಇಲ್ಲಿದೆ ಮಾಹಿತಿ…

ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್‌ಟಿಆರ್ (Jr NTR) ಅವರು ತಮ್ಮ ತಾಯಿ ಶಾಲಿನಿ ನಂದಾಮುರಿ ಅವರ ಜೊತೆ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.

ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ, ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.

ಶಾಲಿನಿ ನಂದಮುರಿ ಅವರು 40 ವರ್ಷಗಳ ಹಿಂದೆ ಪುತ್ರನನ್ನು ಉಡುಪಿ ಶ್ರೀ ಕೃಷ್ಣ ದೇವರ ದರ್ಶನಕ್ಕೆ ಕರೆದುಕೊಂಡು ಬರಬೇಕು ಎಂಬ ಕನಸು ಕಂಡಿದ್ದರಂತೆ. ಇಂದು ಆ ಆಸೆ ಈಡೇರಿದೆ. ಜೂನಿಯರ್ ಎನ್‌ಟಿಆರ್ ತನ್ನ ತಾಯಿ ಶಾಲಿನಿ ಅವರೊಂದಿಗೆ ತನ್ನ ತವರು ಕುಂದಾಪುರಕ್ಕೆ ತೆರಳಿದ್ದರು. ಬಳಿಕ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು

ಈ ಬಗ್ಗೆ ಎನ್‌ಟಿಆರ್ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದರ್ಶನ ಪಡೆಯಲು ಹುಟ್ಟೂರು ಕುಂದಾಪುರಕ್ಕೆ ನನ್ನನ್ನು ಕರೆತರುವ ನನ್ನ ತಾಯಿಯ ಕನಸು ಕೊನೆಗೂ ನನಸಾಗಿದೆ!  ಸೆಪ್ಟೆಂಬರ್ 2 ರಂದು ಅವರ ಜನ್ಮದಿನದ ಮೊದಲು ಅದನ್ನು ನೆರವೇರಿಸುವುದು ನಾನು ಅವಳಿಗೆ ನೀಡಬಹುದಾದ ಅತ್ಯುತ್ತಮ ಕೊಡುಗೆಯಾಗಿದೆ ಎಂದು ಎನ್‌ಟಿಆರ್ ಬರೆದಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಟ ರಿಷಬ್ ಶೆಟ್ಟಿ ಕೂಡ ಅವರೊಂದಿಗೆ ಇದ್ದಾರೆ. ಈ ಫೋಟೋಗಳು ಇದೀಗ ವೈರಲ್ ಆಗಿವೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

11 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

12 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

13 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

18 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

19 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago