ತಾಯಿಯ ತಂಗಿ ಮಗನಿಂದಲೇ ಮನೆಗೆ ಕನ್ನ: ಸದ್ಯ ಆರೋಪಿ ಪೊಲೀಸರ ಅತಿಥಿ: ಕದ್ದ ಮಾಲು ವಶ, ದೂರುದಾರರಿಗೆ ಹಸ್ತಾಂತರ

ತಾಯಿಯ ತಂಗಿ ಮಗನೇ ಮನೆಗೆ ಕನ್ನ ಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಸಮೀಪದ ಮನೆಯೊಂದರಲ್ಲಿ 2025ರ ನ.25ರಂದು ನಡೆದಿತ್ತು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷ ಅವರ ನೇತೃತ್ವದ ನಾರಾಯಣಸ್ವಾಮಿ, ಹರೀಶ್,  ಸುನೀಲ್, ಸಚಿನ್, ಪ್ರವೀಣ್, ಫೈರೋಜ್, ಗಣಪತಿ ಪೊಲೀಸ್ ತಂಡ ಆರೋಪಿಯನ್ನು ಪತ್ತೆ ಹಚ್ಚಿ ಕದ್ದ ಮಾಲನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ….

ಯಲಹಂಕ ಮೂಲದ ಪಾಲನಹಳ್ಳಿ ತೋಟದ ನಿವಾಸಿ ದರ್ಶನ್(22) ಬಂಧಿತ ಆರೋಪಿ…

ಬಂಧಿತನಿಂದ 40 ಗ್ರಾಂ ತೂಕದ ಲಾಂಗ್ ಚೈನ್, 20 ಗ್ರಾಂ ತೂಕದ ಉರಿ ಚೈನ್, 35 ಗ್ರಾಂ ತೂಕದ ಮಾಂಗಲ್ಯ ಚೈನ್, 12 ಗ್ರಾಂ ತೂಕದ ಜುಮುಕಿ, 3 ಗ್ರಾಂ ತೂಕದ ಉಂಗುರವನ್ನು ವಶಕ್ಕೆ ಪಡೆದ ಇನ್ಸ್ ಪೆಕ್ಟರ್ ಸಾದಿಕ್ ಪಾಷ ಅವರು ದೂರುದಾರರನ್ನು ಇಂದು ಠಾಣೆಗೆ ಕರೆಸಿ ಕಳೆದುಕೊಂಡಿದ್ದ ಚಿನ್ನಾಭರಣಗಳನ್ನು ಹಸ್ತಾಂತರ ಮಾಡಿದರು…

ಘಟನೆ ಹಿನ್ನೆಲೆ

ದೂರುದಾರಳ ತಾಯಿಯ ತಂಗಿ ಮಗ ದರ್ಶನ್ ಯಲಹಂಕದ ಮಾರ್ಕೇಟಿನಲ್ಲಿ ಕೆಲಸ ಮಾಡಿಕೊಂಡಿರುತ್ತಾನೆ. ಅವನಿಗೆ ಹಣ ಬೇಕಾದಾಗ ದೊಡ್ಡಬಳ್ಳಾಪುರದ ಕೊಡಿಗೇಹಳ್ಳಿಯಲ್ಲಿರುವ ದೂರುದಾರಳ ಮನೆಗೆ ಬಂದು ಕೇಳುತ್ತಿದ್ದನು. ಆಗ ಆಕೆ ಮರದ ಕಬೋರ್ಡನಿಂದ ಹಣ ನೀಡುತ್ತಿದ್ದರು. ಆನಂತರ ಆಕೆಗೆ ಆರೋಪಿ ದರ್ಶನ್ ವಾಪಸ್ಸು ತಂದುಕೊಡುತ್ತಿದ್ದನು.

ಈಗ್ಗೆ ಎರಡು ಮೂರು ಬಾರಿ ದೂರುದಾರಳ ಬಳಿಯಿಂದ ದರ್ಶನ್ ಹಣ ಪಡೆದುಕೊಂಡು ಹೋಗಿ ಮತ್ತೆ ವಾಪಸ್ಸು ತಂದುಕೊಟ್ಟಿದ್ದ. ಆ ಹಣವನ್ನು ದೂರುದಾರಳು ಮತ್ತೆ ಬೀಗ ತೆಗೆದು ಮರದ ಕಬೋರ್ಡನಲ್ಲಿ ಇಡುತ್ತಿದ್ದರು.

ಅದೇ ಕಬೋರ್ಡನಲ್ಲಿ ದೂರುದಾರಳ ಮದುವೆ ಸಮಯದಲ್ಲಿ ಖರೀದಿ ಮಾಡಿದ್ದ 40 ಗ್ರಾಂ ತೂಕದ ಲಾಂಗ್ ಚಿನ್, 20 ಗ್ರಾಂ ತೂಕದ ಉರಿ ಚೈನ್, 35 ಗ್ರಾಂ ತೂಕದ ಮಾಂಗಲ್ಯ ಚೈನ್, 12 ಗ್ರಾಂ ತೂಕದ ಜುಮುಕಿ, 3 ಗ್ರಾಂ ತೂಕದ ಉಂಗುರ ಇಡಲಾಗಿತ್ತು.

ದೂರುದಾರಳು ಅವುಗಳನ್ನು ಅಕ್ಷಯ ತೃತೀಯ ದಿನದಂದು ಅಂದರೆ 2025ರ ಏ.30ರಂದು ಹಾಕಿಕೊಂಡು ಅದೇ ದಿನ ಸಂಜೆ ಆವುಗಳೆಲ್ಲಾವನ್ನು ತೆಗೆದು ಅದೇ ಕಬೋರ್ಡನಲ್ಲಿಟಿದ್ದರು.

2025ರ ನ.25ರ ಸಂಜೆ 5.00 ಗಂಟೆಗೆ ದೂರುದಾರಳು ಊರಿಗೆ ಹೋಗಲು ಮರದ ಕಬೋರ್ಡ ತೆಗದು ನೋಡಲಾಗಿ 40 ಗ್ರಾಂ ತೂಕದ ಲಾಂಗ್ ಚೈನ್, 20 ಗ್ರಾಂ ತೂಕದ ಉರಿ ಚೈನ್, 35 ಗ್ರಾಂ ತೂಕದ ಮಾಂಗಲ್ಯ ಚೈನ್‌, 12 ಗ್ರಾಂ ತೂಕದ ಜುಮುಕಿ, 3 ಗ್ರಾಂ ತೂಕದ ಉಂಗುರ ನಾಪತ್ತೆ ಆಗಿತ್ತು.

ಆಗ ಆಕೆ ಗಾಬರಿಗೊಂಡು ಮನೆಯ ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಅಕ್ಷಯ ತೃತೀಯ ದಿನದಿಂದ ಇಲ್ಲಿಯವರೆಗೆ ಆಕೆಯ ಮನೆಗೆ ದರ್ಶನ್ ಸುಮಾರು 5-6 ಸಲ ಬಂದು ಹೋಗಿದ್ದನಂತೆ, ಆತನು ಮನೆಗೆ ಬಂದ ಸಂಧರ್ಭದಲ್ಲಿ ಮಕ್ಕಳಿಗೆ ತಿಂಡಿ ತಿನ್ನಲು ಹಣ ನೀಡುತ್ತಿದ್ದನಂತೆ.

ಆಗ ಆಕೆ ಮಕ್ಕಳನ್ನು ಕರೆದುಕೊಂಡು ಬೇಕರಿ ಬಳಿ ತಿಂಡಿ ತಿನಿಸುಗಳನ್ನು ತರಲು ಹೋಗುತ್ತಿದ್ದರಂತೆ, ಆಗ ಮನೆಯಲ್ಲಿ ದರ್ಶನ್ ಒಬ್ಬನೇ ಇರುತ್ತಿದ್ದನಂತೆ. ಆನಂತರ ಆಕೆ ಮನೆಗೆ ಹೋದ ಮೇಲೆ ದರ್ಶನ್ ಮನೆಯಿಂದ ಹೊರ ಹೋಗುತ್ತಿದ್ದನಂತೆ. ಇತ್ತೀಚೆಗೆ ಆರೋಪಿ ದರ್ಶನ್ ಆಕೆಯ ಮನೆಗೆ ಬಂದಿರಲಿಲ್ಲವಂತೆ.

ಮನೆಯಲ್ಲಿನ ಸುಮಾರು 110 ಗ್ರಾಂ ತೂಕದ ಅಂದಾಜು ಮೌಲ್ಯ 12 ಲಕ್ಷ ಬೆಲೆಬಾಳುವ ಚಿನ್ನಾಭರಣಗಳನ್ನು ದರ್ಶನ್ ಕದ್ದಿರಬಹುದು ಎಂದು ಶಂಕಿಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ದೂರಿನ ಮೇರೆಗೆ ದರ್ಶನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಹೊರಬಂದಿದೆ….

ಆನ್ ಲೈನ್ ಗೇಮ್ ಚಟ: ಲಕ್ಷಾಂತರ ಸಾಲ: ಸಾಲ ತೀರಿಸಲು ಚಿನ್ನಾಭರಣ ಕಳವು

ಆನ್‌ಲೈನ್ ಗೇಮ್ ನಿಂದ ಲಕ್ಷಾಂತರ ಹಣ ಕಳೆದುಕೊಂಡಿದ್ದ ಆರೋಪಿ ದರ್ಶನ್, ಸಾಲ ತೀರಿಸಲು ಸಂಬಂಧಿಕರ ಮನೆಗೆ ಕನ್ನ ಹಾಕಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದಾನೆ. ಕದ್ದ ಮಾಲನ್ನು ಸುಮಾರು ಮೂರು ಲಕ್ಷಕ್ಕೆ ಮಣಪುರಂ ಗೋಲ್ಡ್ ಲೋನ್ ಹಾಗೂ ತನಗೆ ಗೊತ್ತಿರುವ ಒಡವೆ ಅಂಗಡಿಯಲ್ಲಿ ಗಿರವಿ ಇಟ್ಟಿದ್ದ…

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

22 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago