ಪ್ರೀತಿ ವಾತ್ಸಲ್ಯದಿಂದ ಸಲುಹಿದ ತಾಯಿಯ ಅಕಾಲಿಕ ಮರಣ ನೆನೆದು ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ನಗರದ ಮೈಕ್ರೋ ಸ್ಟೇಷನ್ ಚಿಕ್ಕಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರದ ಚಿಕ್ಕಪೇಟೆ ಮೈಕ್ರೋ ಸ್ಟೇಷನ್ ನಿವಾಸಿ ದಿವಂಗತ ಮೋಹನ್ ಕುಮಾರ್ ಮತ್ತು ಪಟ್ಟು ದಂಪತಿಗಳ ಪುತ್ರ ಕ್ಯಾಟರಿಂಗ್ ಕೆಲಸ ಮಾಡುತಿದ್ದ ಎಸ್.ಎಂ. ಮಧುಸೂದನ್ 28 ವರ್ಷ ನೇಣಿಗೆ ಶರಣಾದ ವ್ಯಕ್ತಿ.
ಘಟನೆಯ ಸಾರ:
ಚಿಕ್ಕ ಪೇಟೆ ಮೈಕ್ರೋ ಸ್ಟೇಷನ್ ನಿವಾಸಿಯಾಗಿದ್ದ ದಿವಂಗತ ಮೋಹನ್ ಕುಮಾರ್ ಅವರಿಗೆ 6 ಮಂದಿ ಮಕ್ಕಳು ಪೈಕಿ ಇರ್ವರು ಪುತ್ರಿಯರು, ಮತ್ತು ನಾಲ್ಕು ಮಂದಿ ಪುತ್ರರು, ಮೃತನಾದ ಯುವಕ ಐದನೆಯವನು. ಕೆಲವು ತಿಂಗಳ ಹಿಂದೆ ಮೃತನ ತಾಯಿ ಪಟ್ಟು ವಯೊ ಸಹಜ ಕಾಯಿಲೆಗೆ ತುತ್ತಾಗಿ ಮೃತ ಹೊಂದಿದ್ದರು. ತಾಯಿಯ ಅಕಾಲಿಕ ಮರಣ ಯುವಕನ ಮೇಲೆ ಗಾಢವಾದ ಪ್ರಭಾವ ಬೀರಿತು. ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ, ಅ.25 ರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಕೋಣೆಯ ಮೇಲ್ಚಾವಣಿಗೆ ಬಟ್ಟೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಅಣ್ಣ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…