ಪ್ರೀತಿ ವಾತ್ಸಲ್ಯದಿಂದ ಸಲುಹಿದ ತಾಯಿಯ ಅಕಾಲಿಕ ಮರಣ ನೆನೆದು ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ನಗರದ ಮೈಕ್ರೋ ಸ್ಟೇಷನ್ ಚಿಕ್ಕಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರದ ಚಿಕ್ಕಪೇಟೆ ಮೈಕ್ರೋ ಸ್ಟೇಷನ್ ನಿವಾಸಿ ದಿವಂಗತ ಮೋಹನ್ ಕುಮಾರ್ ಮತ್ತು ಪಟ್ಟು ದಂಪತಿಗಳ ಪುತ್ರ ಕ್ಯಾಟರಿಂಗ್ ಕೆಲಸ ಮಾಡುತಿದ್ದ ಎಸ್.ಎಂ. ಮಧುಸೂದನ್ 28 ವರ್ಷ ನೇಣಿಗೆ ಶರಣಾದ ವ್ಯಕ್ತಿ.
ಘಟನೆಯ ಸಾರ:
ಚಿಕ್ಕ ಪೇಟೆ ಮೈಕ್ರೋ ಸ್ಟೇಷನ್ ನಿವಾಸಿಯಾಗಿದ್ದ ದಿವಂಗತ ಮೋಹನ್ ಕುಮಾರ್ ಅವರಿಗೆ 6 ಮಂದಿ ಮಕ್ಕಳು ಪೈಕಿ ಇರ್ವರು ಪುತ್ರಿಯರು, ಮತ್ತು ನಾಲ್ಕು ಮಂದಿ ಪುತ್ರರು, ಮೃತನಾದ ಯುವಕ ಐದನೆಯವನು. ಕೆಲವು ತಿಂಗಳ ಹಿಂದೆ ಮೃತನ ತಾಯಿ ಪಟ್ಟು ವಯೊ ಸಹಜ ಕಾಯಿಲೆಗೆ ತುತ್ತಾಗಿ ಮೃತ ಹೊಂದಿದ್ದರು. ತಾಯಿಯ ಅಕಾಲಿಕ ಮರಣ ಯುವಕನ ಮೇಲೆ ಗಾಢವಾದ ಪ್ರಭಾವ ಬೀರಿತು. ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ, ಅ.25 ರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಕೋಣೆಯ ಮೇಲ್ಚಾವಣಿಗೆ ಬಟ್ಟೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಅಣ್ಣ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…