ಪ್ರೀತಿ ವಾತ್ಸಲ್ಯದಿಂದ ಸಲುಹಿದ ತಾಯಿಯ ಅಕಾಲಿಕ ಮರಣ ನೆನೆದು ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ನಗರದ ಮೈಕ್ರೋ ಸ್ಟೇಷನ್ ಚಿಕ್ಕಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರದ ಚಿಕ್ಕಪೇಟೆ ಮೈಕ್ರೋ ಸ್ಟೇಷನ್ ನಿವಾಸಿ ದಿವಂಗತ ಮೋಹನ್ ಕುಮಾರ್ ಮತ್ತು ಪಟ್ಟು ದಂಪತಿಗಳ ಪುತ್ರ ಕ್ಯಾಟರಿಂಗ್ ಕೆಲಸ ಮಾಡುತಿದ್ದ ಎಸ್.ಎಂ. ಮಧುಸೂದನ್ 28 ವರ್ಷ ನೇಣಿಗೆ ಶರಣಾದ ವ್ಯಕ್ತಿ.
ಘಟನೆಯ ಸಾರ:
ಚಿಕ್ಕ ಪೇಟೆ ಮೈಕ್ರೋ ಸ್ಟೇಷನ್ ನಿವಾಸಿಯಾಗಿದ್ದ ದಿವಂಗತ ಮೋಹನ್ ಕುಮಾರ್ ಅವರಿಗೆ 6 ಮಂದಿ ಮಕ್ಕಳು ಪೈಕಿ ಇರ್ವರು ಪುತ್ರಿಯರು, ಮತ್ತು ನಾಲ್ಕು ಮಂದಿ ಪುತ್ರರು, ಮೃತನಾದ ಯುವಕ ಐದನೆಯವನು. ಕೆಲವು ತಿಂಗಳ ಹಿಂದೆ ಮೃತನ ತಾಯಿ ಪಟ್ಟು ವಯೊ ಸಹಜ ಕಾಯಿಲೆಗೆ ತುತ್ತಾಗಿ ಮೃತ ಹೊಂದಿದ್ದರು. ತಾಯಿಯ ಅಕಾಲಿಕ ಮರಣ ಯುವಕನ ಮೇಲೆ ಗಾಢವಾದ ಪ್ರಭಾವ ಬೀರಿತು. ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ, ಅ.25 ರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಕೋಣೆಯ ಮೇಲ್ಚಾವಣಿಗೆ ಬಟ್ಟೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಅಣ್ಣ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…
ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…
ದೇವನಹಳ್ಳಿ: ತೈಲ ಬೆಲೆ ಏರಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿರುದ್ಧ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…
ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…
ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…