ಪ್ರೀತಿ ವಾತ್ಸಲ್ಯದಿಂದ ಸಲುಹಿದ ತಾಯಿಯ ಅಕಾಲಿಕ ಮರಣ ನೆನೆದು ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ನಗರದ ಮೈಕ್ರೋ ಸ್ಟೇಷನ್ ಚಿಕ್ಕಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರದ ಚಿಕ್ಕಪೇಟೆ ಮೈಕ್ರೋ ಸ್ಟೇಷನ್ ನಿವಾಸಿ ದಿವಂಗತ ಮೋಹನ್ ಕುಮಾರ್ ಮತ್ತು ಪಟ್ಟು ದಂಪತಿಗಳ ಪುತ್ರ ಕ್ಯಾಟರಿಂಗ್ ಕೆಲಸ ಮಾಡುತಿದ್ದ ಎಸ್.ಎಂ. ಮಧುಸೂದನ್ 28 ವರ್ಷ ನೇಣಿಗೆ ಶರಣಾದ ವ್ಯಕ್ತಿ.
ಘಟನೆಯ ಸಾರ:
ಚಿಕ್ಕ ಪೇಟೆ ಮೈಕ್ರೋ ಸ್ಟೇಷನ್ ನಿವಾಸಿಯಾಗಿದ್ದ ದಿವಂಗತ ಮೋಹನ್ ಕುಮಾರ್ ಅವರಿಗೆ 6 ಮಂದಿ ಮಕ್ಕಳು ಪೈಕಿ ಇರ್ವರು ಪುತ್ರಿಯರು, ಮತ್ತು ನಾಲ್ಕು ಮಂದಿ ಪುತ್ರರು, ಮೃತನಾದ ಯುವಕ ಐದನೆಯವನು. ಕೆಲವು ತಿಂಗಳ ಹಿಂದೆ ಮೃತನ ತಾಯಿ ಪಟ್ಟು ವಯೊ ಸಹಜ ಕಾಯಿಲೆಗೆ ತುತ್ತಾಗಿ ಮೃತ ಹೊಂದಿದ್ದರು. ತಾಯಿಯ ಅಕಾಲಿಕ ಮರಣ ಯುವಕನ ಮೇಲೆ ಗಾಢವಾದ ಪ್ರಭಾವ ಬೀರಿತು. ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ, ಅ.25 ರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಕೋಣೆಯ ಮೇಲ್ಚಾವಣಿಗೆ ಬಟ್ಟೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಅಣ್ಣ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…