ಪ್ರೀತಿ ವಾತ್ಸಲ್ಯದಿಂದ ಸಲುಹಿದ ತಾಯಿಯ ಅಕಾಲಿಕ ಮರಣ ನೆನೆದು ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ನಗರದ ಮೈಕ್ರೋ ಸ್ಟೇಷನ್ ಚಿಕ್ಕಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರದ ಚಿಕ್ಕಪೇಟೆ ಮೈಕ್ರೋ ಸ್ಟೇಷನ್ ನಿವಾಸಿ ದಿವಂಗತ ಮೋಹನ್ ಕುಮಾರ್ ಮತ್ತು ಪಟ್ಟು ದಂಪತಿಗಳ ಪುತ್ರ ಕ್ಯಾಟರಿಂಗ್ ಕೆಲಸ ಮಾಡುತಿದ್ದ ಎಸ್.ಎಂ. ಮಧುಸೂದನ್ 28 ವರ್ಷ ನೇಣಿಗೆ ಶರಣಾದ ವ್ಯಕ್ತಿ.
ಘಟನೆಯ ಸಾರ:
ಚಿಕ್ಕ ಪೇಟೆ ಮೈಕ್ರೋ ಸ್ಟೇಷನ್ ನಿವಾಸಿಯಾಗಿದ್ದ ದಿವಂಗತ ಮೋಹನ್ ಕುಮಾರ್ ಅವರಿಗೆ 6 ಮಂದಿ ಮಕ್ಕಳು ಪೈಕಿ ಇರ್ವರು ಪುತ್ರಿಯರು, ಮತ್ತು ನಾಲ್ಕು ಮಂದಿ ಪುತ್ರರು, ಮೃತನಾದ ಯುವಕ ಐದನೆಯವನು. ಕೆಲವು ತಿಂಗಳ ಹಿಂದೆ ಮೃತನ ತಾಯಿ ಪಟ್ಟು ವಯೊ ಸಹಜ ಕಾಯಿಲೆಗೆ ತುತ್ತಾಗಿ ಮೃತ ಹೊಂದಿದ್ದರು. ತಾಯಿಯ ಅಕಾಲಿಕ ಮರಣ ಯುವಕನ ಮೇಲೆ ಗಾಢವಾದ ಪ್ರಭಾವ ಬೀರಿತು. ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ, ಅ.25 ರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಕೋಣೆಯ ಮೇಲ್ಚಾವಣಿಗೆ ಬಟ್ಟೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಅಣ್ಣ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…