ಪ್ರೀತಿ ವಾತ್ಸಲ್ಯದಿಂದ ಸಲುಹಿದ ತಾಯಿಯ ಅಕಾಲಿಕ ಮರಣ ನೆನೆದು ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ನಗರದ ಮೈಕ್ರೋ ಸ್ಟೇಷನ್ ಚಿಕ್ಕಪೇಟೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರದ ಚಿಕ್ಕಪೇಟೆ ಮೈಕ್ರೋ ಸ್ಟೇಷನ್ ನಿವಾಸಿ ದಿವಂಗತ ಮೋಹನ್ ಕುಮಾರ್ ಮತ್ತು ಪಟ್ಟು ದಂಪತಿಗಳ ಪುತ್ರ ಕ್ಯಾಟರಿಂಗ್ ಕೆಲಸ ಮಾಡುತಿದ್ದ ಎಸ್.ಎಂ. ಮಧುಸೂದನ್ 28 ವರ್ಷ ನೇಣಿಗೆ ಶರಣಾದ ವ್ಯಕ್ತಿ.
ಘಟನೆಯ ಸಾರ:
ಚಿಕ್ಕ ಪೇಟೆ ಮೈಕ್ರೋ ಸ್ಟೇಷನ್ ನಿವಾಸಿಯಾಗಿದ್ದ ದಿವಂಗತ ಮೋಹನ್ ಕುಮಾರ್ ಅವರಿಗೆ 6 ಮಂದಿ ಮಕ್ಕಳು ಪೈಕಿ ಇರ್ವರು ಪುತ್ರಿಯರು, ಮತ್ತು ನಾಲ್ಕು ಮಂದಿ ಪುತ್ರರು, ಮೃತನಾದ ಯುವಕ ಐದನೆಯವನು. ಕೆಲವು ತಿಂಗಳ ಹಿಂದೆ ಮೃತನ ತಾಯಿ ಪಟ್ಟು ವಯೊ ಸಹಜ ಕಾಯಿಲೆಗೆ ತುತ್ತಾಗಿ ಮೃತ ಹೊಂದಿದ್ದರು. ತಾಯಿಯ ಅಕಾಲಿಕ ಮರಣ ಯುವಕನ ಮೇಲೆ ಗಾಢವಾದ ಪ್ರಭಾವ ಬೀರಿತು. ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ, ಅ.25 ರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಕೋಣೆಯ ಮೇಲ್ಚಾವಣಿಗೆ ಬಟ್ಟೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಅಣ್ಣ ಮಂಜುನಾಥ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…