ರೈಲಿಗೆ ತಲೆಕೊಟ್ಟು ಅಣ್ಣ-ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.
ಮೃತ ದುರ್ದೈವಿಗಳನ್ನು ಶಿಡ್ಲಘಟ್ಟ ನಗರದ ಪ್ರೇಮನಗರದ ನಿವಾಸಿಗಳಾದ ಅಣ್ಣ ಪ್ರಭು(30) ತಂಗಿ ಶಿಲ್ಪ (28) ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ರೈಲ್ವೆ ಹಳಿಗಳ ಮೇಲೆ ರುಂಡ- ಮುಂಡ ಬೇರೆ ಬೇರೆಯಾಗಿ ಬೇರ್ಪಟ್ಟ ಸ್ಥಿತಿಯಲ್ಲಿ ಎರಡು ಮೃತ ದೇಹಗಳು ಪತ್ತೆಯಾಗಿದ್ದು, ನಗರ ನಿವಾಸಿಗಳನ್ನು ಭಯಭೀತರನ್ನಾಗಿಸಿದೆ.
ಮೊದಲಿಗೆ ಯಾರೋ ಪ್ರೇಮಿಗಳು ಇರಬಹುದು ಎಂದು ಹೇಳಲಾಗಿತ್ತು. ಆದರೆ, ಅವರು ಒಡಹುಟ್ಟಿದವರು ಎಂದು ತಿಳಿದು ಬಂದಿದ್ದು, ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.
ಇನ್ನೂ ಕಳೆದ ರಾತ್ರಿ ರೈಲಿಗೆ ತಲೆಗೆ ಕೊಟ್ಟು ಇಬ್ಬರು ಜೀವ ಕಳೆದುಕೊಂಡಿದ್ದು, ಇಂದು ಬೆಳಗ್ಗೆ ರೈಲ್ವೆ ಸಿಬ್ಬಂದಿ ಹಾಗೂ ಸಾರ್ವಜನಿಕರು ವಾಕಿಂಗ್ ಹೋದಂತದ ಸಂದರ್ಭದಲ್ಲಿ ಎರಡು ಮೃತ ದೇಹಗಳು ರೈಲು ಹಳಿಗಳ ಮೇಲೆ ಕಂಡುಬಂದಿದೆ.
ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಮಾಹಿತಿಯನ್ನು ಮುಟ್ಟಿಸಿದ್ದಾರೆ. ಇನ್ನೂ ಮೃತ ಅಕ್ಕ-ತಮ್ಮ ಕಳೆದ ಎರಡು ತಿಂಗಳ ಹಿಂದೆ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಇದರಿಂದ ಸಾಕಷ್ಟು ಮನನೊಂದಿದ್ದ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ನಿಂದ-ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…