ರೈಲಿಗೆ ತಲೆಕೊಟ್ಟು ಅಣ್ಣ-ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.
ಮೃತ ದುರ್ದೈವಿಗಳನ್ನು ಶಿಡ್ಲಘಟ್ಟ ನಗರದ ಪ್ರೇಮನಗರದ ನಿವಾಸಿಗಳಾದ ಅಣ್ಣ ಪ್ರಭು(30) ತಂಗಿ ಶಿಲ್ಪ (28) ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ರೈಲ್ವೆ ಹಳಿಗಳ ಮೇಲೆ ರುಂಡ- ಮುಂಡ ಬೇರೆ ಬೇರೆಯಾಗಿ ಬೇರ್ಪಟ್ಟ ಸ್ಥಿತಿಯಲ್ಲಿ ಎರಡು ಮೃತ ದೇಹಗಳು ಪತ್ತೆಯಾಗಿದ್ದು, ನಗರ ನಿವಾಸಿಗಳನ್ನು ಭಯಭೀತರನ್ನಾಗಿಸಿದೆ.
ಮೊದಲಿಗೆ ಯಾರೋ ಪ್ರೇಮಿಗಳು ಇರಬಹುದು ಎಂದು ಹೇಳಲಾಗಿತ್ತು. ಆದರೆ, ಅವರು ಒಡಹುಟ್ಟಿದವರು ಎಂದು ತಿಳಿದು ಬಂದಿದ್ದು, ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.
ಇನ್ನೂ ಕಳೆದ ರಾತ್ರಿ ರೈಲಿಗೆ ತಲೆಗೆ ಕೊಟ್ಟು ಇಬ್ಬರು ಜೀವ ಕಳೆದುಕೊಂಡಿದ್ದು, ಇಂದು ಬೆಳಗ್ಗೆ ರೈಲ್ವೆ ಸಿಬ್ಬಂದಿ ಹಾಗೂ ಸಾರ್ವಜನಿಕರು ವಾಕಿಂಗ್ ಹೋದಂತದ ಸಂದರ್ಭದಲ್ಲಿ ಎರಡು ಮೃತ ದೇಹಗಳು ರೈಲು ಹಳಿಗಳ ಮೇಲೆ ಕಂಡುಬಂದಿದೆ.
ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಮಾಹಿತಿಯನ್ನು ಮುಟ್ಟಿಸಿದ್ದಾರೆ. ಇನ್ನೂ ಮೃತ ಅಕ್ಕ-ತಮ್ಮ ಕಳೆದ ಎರಡು ತಿಂಗಳ ಹಿಂದೆ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಇದರಿಂದ ಸಾಕಷ್ಟು ಮನನೊಂದಿದ್ದ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ನಿಂದ-ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…