ರೈಲಿಗೆ ತಲೆಕೊಟ್ಟು ಅಣ್ಣ-ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.
ಮೃತ ದುರ್ದೈವಿಗಳನ್ನು ಶಿಡ್ಲಘಟ್ಟ ನಗರದ ಪ್ರೇಮನಗರದ ನಿವಾಸಿಗಳಾದ ಅಣ್ಣ ಪ್ರಭು(30) ತಂಗಿ ಶಿಲ್ಪ (28) ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ರೈಲ್ವೆ ಹಳಿಗಳ ಮೇಲೆ ರುಂಡ- ಮುಂಡ ಬೇರೆ ಬೇರೆಯಾಗಿ ಬೇರ್ಪಟ್ಟ ಸ್ಥಿತಿಯಲ್ಲಿ ಎರಡು ಮೃತ ದೇಹಗಳು ಪತ್ತೆಯಾಗಿದ್ದು, ನಗರ ನಿವಾಸಿಗಳನ್ನು ಭಯಭೀತರನ್ನಾಗಿಸಿದೆ.
ಮೊದಲಿಗೆ ಯಾರೋ ಪ್ರೇಮಿಗಳು ಇರಬಹುದು ಎಂದು ಹೇಳಲಾಗಿತ್ತು. ಆದರೆ, ಅವರು ಒಡಹುಟ್ಟಿದವರು ಎಂದು ತಿಳಿದು ಬಂದಿದ್ದು, ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.
ಇನ್ನೂ ಕಳೆದ ರಾತ್ರಿ ರೈಲಿಗೆ ತಲೆಗೆ ಕೊಟ್ಟು ಇಬ್ಬರು ಜೀವ ಕಳೆದುಕೊಂಡಿದ್ದು, ಇಂದು ಬೆಳಗ್ಗೆ ರೈಲ್ವೆ ಸಿಬ್ಬಂದಿ ಹಾಗೂ ಸಾರ್ವಜನಿಕರು ವಾಕಿಂಗ್ ಹೋದಂತದ ಸಂದರ್ಭದಲ್ಲಿ ಎರಡು ಮೃತ ದೇಹಗಳು ರೈಲು ಹಳಿಗಳ ಮೇಲೆ ಕಂಡುಬಂದಿದೆ.
ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಮಾಹಿತಿಯನ್ನು ಮುಟ್ಟಿಸಿದ್ದಾರೆ. ಇನ್ನೂ ಮೃತ ಅಕ್ಕ-ತಮ್ಮ ಕಳೆದ ಎರಡು ತಿಂಗಳ ಹಿಂದೆ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಇದರಿಂದ ಸಾಕಷ್ಟು ಮನನೊಂದಿದ್ದ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ನಿಂದ-ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…