ರೈಲಿಗೆ ತಲೆಕೊಟ್ಟು ಅಣ್ಣ-ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ.
ಮೃತ ದುರ್ದೈವಿಗಳನ್ನು ಶಿಡ್ಲಘಟ್ಟ ನಗರದ ಪ್ರೇಮನಗರದ ನಿವಾಸಿಗಳಾದ ಅಣ್ಣ ಪ್ರಭು(30) ತಂಗಿ ಶಿಲ್ಪ (28) ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ರೈಲ್ವೆ ಹಳಿಗಳ ಮೇಲೆ ರುಂಡ- ಮುಂಡ ಬೇರೆ ಬೇರೆಯಾಗಿ ಬೇರ್ಪಟ್ಟ ಸ್ಥಿತಿಯಲ್ಲಿ ಎರಡು ಮೃತ ದೇಹಗಳು ಪತ್ತೆಯಾಗಿದ್ದು, ನಗರ ನಿವಾಸಿಗಳನ್ನು ಭಯಭೀತರನ್ನಾಗಿಸಿದೆ.
ಮೊದಲಿಗೆ ಯಾರೋ ಪ್ರೇಮಿಗಳು ಇರಬಹುದು ಎಂದು ಹೇಳಲಾಗಿತ್ತು. ಆದರೆ, ಅವರು ಒಡಹುಟ್ಟಿದವರು ಎಂದು ತಿಳಿದು ಬಂದಿದ್ದು, ಎಲ್ಲರ ಕಣ್ಣಲ್ಲಿ ನೀರು ತರಿಸಿದೆ.
ಇನ್ನೂ ಕಳೆದ ರಾತ್ರಿ ರೈಲಿಗೆ ತಲೆಗೆ ಕೊಟ್ಟು ಇಬ್ಬರು ಜೀವ ಕಳೆದುಕೊಂಡಿದ್ದು, ಇಂದು ಬೆಳಗ್ಗೆ ರೈಲ್ವೆ ಸಿಬ್ಬಂದಿ ಹಾಗೂ ಸಾರ್ವಜನಿಕರು ವಾಕಿಂಗ್ ಹೋದಂತದ ಸಂದರ್ಭದಲ್ಲಿ ಎರಡು ಮೃತ ದೇಹಗಳು ರೈಲು ಹಳಿಗಳ ಮೇಲೆ ಕಂಡುಬಂದಿದೆ.
ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಮಾಹಿತಿಯನ್ನು ಮುಟ್ಟಿಸಿದ್ದಾರೆ. ಇನ್ನೂ ಮೃತ ಅಕ್ಕ-ತಮ್ಮ ಕಳೆದ ಎರಡು ತಿಂಗಳ ಹಿಂದೆ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಇದರಿಂದ ಸಾಕಷ್ಟು ಮನನೊಂದಿದ್ದ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು ನಿಂದ-ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…