ತಾಯಿಯ ಸಾವಿರ ಹಣ ಪಿಂಚಣಿ ಹಣಕ್ಕೆ ಮೂವರು ಅಣ್ಣತಮ್ಮಂದಿರ ನಡುವೆ ತಗಾದೆ: ಅಣ್ಣನ ಕೊಲೆಯಲ್ಲಿ ಅಂತ್ಯ

ಒಂಭತ್ತು ತಿಂಗಳು ಹೊತ್ತು‌ಹೆತ್ತು ಬೆಳೆಸಿದ ಮಕ್ಕಳು ಮುಪ್ಪಾದಾಗ ತಂದೆ-ತಾಯಿಗೆ ಆಸೆರೆಯಾಗುತ್ತಾರೆ ಎಂಬ ಆಸೆರೆಯಿಂದ ಕೂಲಿನಾಲಿ ಮಾಡಿ ಬೆಳೆಸಿದ್ರು. ಆದ್ರೆ ತಂದೆ ಸತ್ತ ಮೇಳೆ ತಾಯಿಯನ್ನು ನೋಡಿಕೊಳ್ಳಬೇಕಾದ ಮಕ್ಕಳೇ ತಂದೆಗೆ ಬರುವ ಸಾವಿರ ರೂಪಾಯಿ ಪಿಂಚಣಿಗಾಗಿ ಕಿತ್ತಾಡಿ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ…ಇಷ್ಟಕ್ಕೂ ಆ ಘಟನೆ ನಡೆದಿದ್ದು ಎಲ್ಲಿ ಅಂತೀರಾ…

ಹೀಗೆ ತಾಯಿಯ ಪಿಂಚಣಿ ಹಣಕ್ಕಾಗಿ ಸ್ವಂತ ಅಣ್ಣನ ಮನೆಯ ಬಾಗಿಲನ್ನು ಹೊಡೆದಿರುವ ಅಣ್ಣತಮ್ಮಂದಿರು, ಮಕ್ಕಳಿಂದಲೇ ತನ್ನ ಹಿರಿಯ ಮಗನನ್ನು ದೊಣ್ಣೆಗಳಿಂದ ಭೀಕರವಾಗಿ ಕೊಲೆ ಮಾಡಿರುವ ದೃಶ್ಯಗಳು ಕಂಡು ಕಣ್ಣೀರಿಡುತ್ತಿರುವ ತಾಯಿ.. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದಲ್ಲಿ..

ಸ್ವಂತ ತಮ್ಮಂದಿರ ಕೈಯಲ್ಲಿ ಭೀಕರವಾಗಿ ಕೊಲೆಯಾಗಿರುವನ‌ ಹೆಸರು ನರಸಿಂಹಮೂರ್ತಿ.. ಮಾಡಿದೆಲ್ಲಾ ಮಾಡಿ ಅಮಾಯಕರಂತೆ ನಿಂತುಕೊಂಡಿರುವವರ ಹೆಸರು ರಾಮಾಂಜಿ ಹಾಗೂ ಗಂಗಾಧರಪ್ಪ ಇವರಿಬ್ಬರು ಒಡ ಹುಟ್ಟಿದ ಅಣ್ಣತಮ್ಮಂದಿರು..

ಇನ್ನೂ ಗಂಗಮ್ಮ ಹಾಗೂ ಹನುಮಂತರಾಯಪ್ಪ ದಂಪತಿಗಳಿಗೆ ಮೂವರು ಗಂಡು ಮಕ್ಕಳು ಇದ್ರು..ಇನ್ನೂ ಬೆಸ್ಕಾಂ ನಲ್ಲಿ ಲೈನ್ ಮ್ಯಾನ್ ಕೆಲಸ ಮಾಡುತ್ತಿದ್ದ ಹನುಮಂತರಾಯಪ್ಪ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದ..ಮೃತಪಟ್ಟ ನಂತರ ತಂದೆಯ ಪಿಂಚಣಿ ಹಣ ತಾಯಿಗೆ ಬರುತ್ತಿತ್ತು ಇದೆ ಹಣ ವಿಚಾರಕ್ಕೆ ಮೂವರ ಮಕ್ಕಳ ನಡುವೆ ತಗಾದೆ ಶುರುವಾಗಿದೆ..ನಾನೇ ತಾಯಿಯನ್ನು ನೋಡಿಕೊಳ್ಳುತ್ತಿದ್ದು ನನಗೆ ಹಣ ಸೇರಬೇಕು ಎಂದು ಹಠಕ್ಕೆ ಬಿದ್ದಿದ್ದ ನರಸಿಂಹಮೂರ್ತಿ ಹಾಗೂ ರಾಮಾಂಜಿ, ಗಂಗಾಧರಪ್ಪ ನಡುವೆ ಮಾತಿಗೆ ಮಾತು ಬೆಳೆದು ರಾಜಿಪಂಚಾಯತಿಗಳು ನಡೆದಿದೆ…ಆದ್ರೆ ಅಣ್ಣ ನರಸಿಂಹಮೂರ್ತಿ ನಮಗೆ ತಾಯಿಯ ಪಿಂಚಣಿ ಹಣ ನೀಡುವುದಿಲ್ಲಾ ಎಂದು ಕೋಪಗೊಂಡ ರಾಮಾಂಜಿ ಹಾಗೂ ಗಂಗಾಧರಪ್ಪ ನರಸಿಂಹಮೂರ್ತಿ ಮನೆ ಬಳಿ ಹೋಗಿ ಮನೆಯ ಬಾಗಿಲು ಒಡೆದು ಮನೆಯ ಒಳಗೆ ಇದ್ದ ನರಸಿಂಹಮೂರ್ತಿಯನ್ನು ದೊಣ್ಣೆಗಳಿಂದ ಒಡೆದು ಭೀಕರವಾಗಿ ಕೊಲೆ ಮಾಡಿದ್ದಾರೆ..

ಇನ್ನೂ ತಂದೆ ಸತ್ತ ಮೇಲೆ ತಾಯಿಗೆ ಬರುತ್ತಿದ್ದ ಒಂದು ಸಾವಿರ ಪಿಂಚಣಿ ಹಣದಲ್ಲಿ ತನ್ನ ಹಿರಿಯ ಮಗ ನರಸಿಂಹಮೂರ್ತಿಗೆ ಒಂದು ಸಾವಿರ ರೂಪಾಯಿಯನ್ನು ಕೊಟ್ಟಿದ್ಲು..ಇದರಿಂದ ಕುಪಿತಗೊಂಡ ಇಬ್ಬರು ಮಕ್ಕಳು ನಮಗೂ ಹಣಕೊಡುವಂತೆ ಬೇಡಿಕೆ ಇಟ್ಟಿದ್ರು..ಇದೇ ವಿಚಾರಕ್ಕೆ ಅಣ್ಣತಮ್ಮಂದಿರ ನಡುವೆ ನಡೆದ ಗಲಾಟೆಯಲ್ಲಿ ಒಡಹುಟ್ಟಿದ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ..

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ಮಾಡಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ..

ಒಟ್ಟಾರೇ ಹುಟ್ಟುತ್ತ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯದಿಗಳು ಎಂಬಂತೆ ಕೇವಲ ತಾಯಿಯ ಸಾವಿರ ಹಣ ಪಿಂಚಣಿ ಹಣಕ್ಕೆ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವುದು ವಿರ್ಪಯಾಸವಾಗಿದೆ..

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

2 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

2 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

3 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

8 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

14 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago