ತಾಯಿಯ ಸಾವಿರ ಹಣ ಪಿಂಚಣಿ ಹಣಕ್ಕೆ ಮೂವರು ಅಣ್ಣತಮ್ಮಂದಿರ ನಡುವೆ ತಗಾದೆ: ಅಣ್ಣನ ಕೊಲೆಯಲ್ಲಿ ಅಂತ್ಯ

ಒಂಭತ್ತು ತಿಂಗಳು ಹೊತ್ತು‌ಹೆತ್ತು ಬೆಳೆಸಿದ ಮಕ್ಕಳು ಮುಪ್ಪಾದಾಗ ತಂದೆ-ತಾಯಿಗೆ ಆಸೆರೆಯಾಗುತ್ತಾರೆ ಎಂಬ ಆಸೆರೆಯಿಂದ ಕೂಲಿನಾಲಿ ಮಾಡಿ ಬೆಳೆಸಿದ್ರು. ಆದ್ರೆ ತಂದೆ ಸತ್ತ ಮೇಳೆ ತಾಯಿಯನ್ನು ನೋಡಿಕೊಳ್ಳಬೇಕಾದ ಮಕ್ಕಳೇ ತಂದೆಗೆ ಬರುವ ಸಾವಿರ ರೂಪಾಯಿ ಪಿಂಚಣಿಗಾಗಿ ಕಿತ್ತಾಡಿ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ…ಇಷ್ಟಕ್ಕೂ ಆ ಘಟನೆ ನಡೆದಿದ್ದು ಎಲ್ಲಿ ಅಂತೀರಾ…

ಹೀಗೆ ತಾಯಿಯ ಪಿಂಚಣಿ ಹಣಕ್ಕಾಗಿ ಸ್ವಂತ ಅಣ್ಣನ ಮನೆಯ ಬಾಗಿಲನ್ನು ಹೊಡೆದಿರುವ ಅಣ್ಣತಮ್ಮಂದಿರು, ಮಕ್ಕಳಿಂದಲೇ ತನ್ನ ಹಿರಿಯ ಮಗನನ್ನು ದೊಣ್ಣೆಗಳಿಂದ ಭೀಕರವಾಗಿ ಕೊಲೆ ಮಾಡಿರುವ ದೃಶ್ಯಗಳು ಕಂಡು ಕಣ್ಣೀರಿಡುತ್ತಿರುವ ತಾಯಿ.. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದಲ್ಲಿ..

ಸ್ವಂತ ತಮ್ಮಂದಿರ ಕೈಯಲ್ಲಿ ಭೀಕರವಾಗಿ ಕೊಲೆಯಾಗಿರುವನ‌ ಹೆಸರು ನರಸಿಂಹಮೂರ್ತಿ.. ಮಾಡಿದೆಲ್ಲಾ ಮಾಡಿ ಅಮಾಯಕರಂತೆ ನಿಂತುಕೊಂಡಿರುವವರ ಹೆಸರು ರಾಮಾಂಜಿ ಹಾಗೂ ಗಂಗಾಧರಪ್ಪ ಇವರಿಬ್ಬರು ಒಡ ಹುಟ್ಟಿದ ಅಣ್ಣತಮ್ಮಂದಿರು..

ಇನ್ನೂ ಗಂಗಮ್ಮ ಹಾಗೂ ಹನುಮಂತರಾಯಪ್ಪ ದಂಪತಿಗಳಿಗೆ ಮೂವರು ಗಂಡು ಮಕ್ಕಳು ಇದ್ರು..ಇನ್ನೂ ಬೆಸ್ಕಾಂ ನಲ್ಲಿ ಲೈನ್ ಮ್ಯಾನ್ ಕೆಲಸ ಮಾಡುತ್ತಿದ್ದ ಹನುಮಂತರಾಯಪ್ಪ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದ..ಮೃತಪಟ್ಟ ನಂತರ ತಂದೆಯ ಪಿಂಚಣಿ ಹಣ ತಾಯಿಗೆ ಬರುತ್ತಿತ್ತು ಇದೆ ಹಣ ವಿಚಾರಕ್ಕೆ ಮೂವರ ಮಕ್ಕಳ ನಡುವೆ ತಗಾದೆ ಶುರುವಾಗಿದೆ..ನಾನೇ ತಾಯಿಯನ್ನು ನೋಡಿಕೊಳ್ಳುತ್ತಿದ್ದು ನನಗೆ ಹಣ ಸೇರಬೇಕು ಎಂದು ಹಠಕ್ಕೆ ಬಿದ್ದಿದ್ದ ನರಸಿಂಹಮೂರ್ತಿ ಹಾಗೂ ರಾಮಾಂಜಿ, ಗಂಗಾಧರಪ್ಪ ನಡುವೆ ಮಾತಿಗೆ ಮಾತು ಬೆಳೆದು ರಾಜಿಪಂಚಾಯತಿಗಳು ನಡೆದಿದೆ…ಆದ್ರೆ ಅಣ್ಣ ನರಸಿಂಹಮೂರ್ತಿ ನಮಗೆ ತಾಯಿಯ ಪಿಂಚಣಿ ಹಣ ನೀಡುವುದಿಲ್ಲಾ ಎಂದು ಕೋಪಗೊಂಡ ರಾಮಾಂಜಿ ಹಾಗೂ ಗಂಗಾಧರಪ್ಪ ನರಸಿಂಹಮೂರ್ತಿ ಮನೆ ಬಳಿ ಹೋಗಿ ಮನೆಯ ಬಾಗಿಲು ಒಡೆದು ಮನೆಯ ಒಳಗೆ ಇದ್ದ ನರಸಿಂಹಮೂರ್ತಿಯನ್ನು ದೊಣ್ಣೆಗಳಿಂದ ಒಡೆದು ಭೀಕರವಾಗಿ ಕೊಲೆ ಮಾಡಿದ್ದಾರೆ..

ಇನ್ನೂ ತಂದೆ ಸತ್ತ ಮೇಲೆ ತಾಯಿಗೆ ಬರುತ್ತಿದ್ದ ಒಂದು ಸಾವಿರ ಪಿಂಚಣಿ ಹಣದಲ್ಲಿ ತನ್ನ ಹಿರಿಯ ಮಗ ನರಸಿಂಹಮೂರ್ತಿಗೆ ಒಂದು ಸಾವಿರ ರೂಪಾಯಿಯನ್ನು ಕೊಟ್ಟಿದ್ಲು..ಇದರಿಂದ ಕುಪಿತಗೊಂಡ ಇಬ್ಬರು ಮಕ್ಕಳು ನಮಗೂ ಹಣಕೊಡುವಂತೆ ಬೇಡಿಕೆ ಇಟ್ಟಿದ್ರು..ಇದೇ ವಿಚಾರಕ್ಕೆ ಅಣ್ಣತಮ್ಮಂದಿರ ನಡುವೆ ನಡೆದ ಗಲಾಟೆಯಲ್ಲಿ ಒಡಹುಟ್ಟಿದ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ..

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ಮಾಡಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ..

ಒಟ್ಟಾರೇ ಹುಟ್ಟುತ್ತ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯದಿಗಳು ಎಂಬಂತೆ ಕೇವಲ ತಾಯಿಯ ಸಾವಿರ ಹಣ ಪಿಂಚಣಿ ಹಣಕ್ಕೆ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವುದು ವಿರ್ಪಯಾಸವಾಗಿದೆ..

Ramesh Babu

Journalist

Recent Posts

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

6 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

7 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

7 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

7 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

7 hours ago

ಅತಿವೇಗ: ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಕಾರು ಡಿಕ್ಕಿ – ಕಾರು ನುಜ್ಜುಗೊಜ್ಜು, ಇಬ್ಬರು ಯುವಕರು ಪವಾಡ ರೀತಿಯಲ್ಲಿ ಪಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…

9 hours ago