ತಾಯಿಯ ಸಾವಿರ ಹಣ ಪಿಂಚಣಿ ಹಣಕ್ಕೆ ಮೂವರು ಅಣ್ಣತಮ್ಮಂದಿರ ನಡುವೆ ತಗಾದೆ: ಅಣ್ಣನ ಕೊಲೆಯಲ್ಲಿ ಅಂತ್ಯ

ಒಂಭತ್ತು ತಿಂಗಳು ಹೊತ್ತು‌ಹೆತ್ತು ಬೆಳೆಸಿದ ಮಕ್ಕಳು ಮುಪ್ಪಾದಾಗ ತಂದೆ-ತಾಯಿಗೆ ಆಸೆರೆಯಾಗುತ್ತಾರೆ ಎಂಬ ಆಸೆರೆಯಿಂದ ಕೂಲಿನಾಲಿ ಮಾಡಿ ಬೆಳೆಸಿದ್ರು. ಆದ್ರೆ ತಂದೆ ಸತ್ತ ಮೇಳೆ ತಾಯಿಯನ್ನು ನೋಡಿಕೊಳ್ಳಬೇಕಾದ ಮಕ್ಕಳೇ ತಂದೆಗೆ ಬರುವ ಸಾವಿರ ರೂಪಾಯಿ ಪಿಂಚಣಿಗಾಗಿ ಕಿತ್ತಾಡಿ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ…ಇಷ್ಟಕ್ಕೂ ಆ ಘಟನೆ ನಡೆದಿದ್ದು ಎಲ್ಲಿ ಅಂತೀರಾ…

ಹೀಗೆ ತಾಯಿಯ ಪಿಂಚಣಿ ಹಣಕ್ಕಾಗಿ ಸ್ವಂತ ಅಣ್ಣನ ಮನೆಯ ಬಾಗಿಲನ್ನು ಹೊಡೆದಿರುವ ಅಣ್ಣತಮ್ಮಂದಿರು, ಮಕ್ಕಳಿಂದಲೇ ತನ್ನ ಹಿರಿಯ ಮಗನನ್ನು ದೊಣ್ಣೆಗಳಿಂದ ಭೀಕರವಾಗಿ ಕೊಲೆ ಮಾಡಿರುವ ದೃಶ್ಯಗಳು ಕಂಡು ಕಣ್ಣೀರಿಡುತ್ತಿರುವ ತಾಯಿ.. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದಲ್ಲಿ..

ಸ್ವಂತ ತಮ್ಮಂದಿರ ಕೈಯಲ್ಲಿ ಭೀಕರವಾಗಿ ಕೊಲೆಯಾಗಿರುವನ‌ ಹೆಸರು ನರಸಿಂಹಮೂರ್ತಿ.. ಮಾಡಿದೆಲ್ಲಾ ಮಾಡಿ ಅಮಾಯಕರಂತೆ ನಿಂತುಕೊಂಡಿರುವವರ ಹೆಸರು ರಾಮಾಂಜಿ ಹಾಗೂ ಗಂಗಾಧರಪ್ಪ ಇವರಿಬ್ಬರು ಒಡ ಹುಟ್ಟಿದ ಅಣ್ಣತಮ್ಮಂದಿರು..

ಇನ್ನೂ ಗಂಗಮ್ಮ ಹಾಗೂ ಹನುಮಂತರಾಯಪ್ಪ ದಂಪತಿಗಳಿಗೆ ಮೂವರು ಗಂಡು ಮಕ್ಕಳು ಇದ್ರು..ಇನ್ನೂ ಬೆಸ್ಕಾಂ ನಲ್ಲಿ ಲೈನ್ ಮ್ಯಾನ್ ಕೆಲಸ ಮಾಡುತ್ತಿದ್ದ ಹನುಮಂತರಾಯಪ್ಪ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದ..ಮೃತಪಟ್ಟ ನಂತರ ತಂದೆಯ ಪಿಂಚಣಿ ಹಣ ತಾಯಿಗೆ ಬರುತ್ತಿತ್ತು ಇದೆ ಹಣ ವಿಚಾರಕ್ಕೆ ಮೂವರ ಮಕ್ಕಳ ನಡುವೆ ತಗಾದೆ ಶುರುವಾಗಿದೆ..ನಾನೇ ತಾಯಿಯನ್ನು ನೋಡಿಕೊಳ್ಳುತ್ತಿದ್ದು ನನಗೆ ಹಣ ಸೇರಬೇಕು ಎಂದು ಹಠಕ್ಕೆ ಬಿದ್ದಿದ್ದ ನರಸಿಂಹಮೂರ್ತಿ ಹಾಗೂ ರಾಮಾಂಜಿ, ಗಂಗಾಧರಪ್ಪ ನಡುವೆ ಮಾತಿಗೆ ಮಾತು ಬೆಳೆದು ರಾಜಿಪಂಚಾಯತಿಗಳು ನಡೆದಿದೆ…ಆದ್ರೆ ಅಣ್ಣ ನರಸಿಂಹಮೂರ್ತಿ ನಮಗೆ ತಾಯಿಯ ಪಿಂಚಣಿ ಹಣ ನೀಡುವುದಿಲ್ಲಾ ಎಂದು ಕೋಪಗೊಂಡ ರಾಮಾಂಜಿ ಹಾಗೂ ಗಂಗಾಧರಪ್ಪ ನರಸಿಂಹಮೂರ್ತಿ ಮನೆ ಬಳಿ ಹೋಗಿ ಮನೆಯ ಬಾಗಿಲು ಒಡೆದು ಮನೆಯ ಒಳಗೆ ಇದ್ದ ನರಸಿಂಹಮೂರ್ತಿಯನ್ನು ದೊಣ್ಣೆಗಳಿಂದ ಒಡೆದು ಭೀಕರವಾಗಿ ಕೊಲೆ ಮಾಡಿದ್ದಾರೆ..

ಇನ್ನೂ ತಂದೆ ಸತ್ತ ಮೇಲೆ ತಾಯಿಗೆ ಬರುತ್ತಿದ್ದ ಒಂದು ಸಾವಿರ ಪಿಂಚಣಿ ಹಣದಲ್ಲಿ ತನ್ನ ಹಿರಿಯ ಮಗ ನರಸಿಂಹಮೂರ್ತಿಗೆ ಒಂದು ಸಾವಿರ ರೂಪಾಯಿಯನ್ನು ಕೊಟ್ಟಿದ್ಲು..ಇದರಿಂದ ಕುಪಿತಗೊಂಡ ಇಬ್ಬರು ಮಕ್ಕಳು ನಮಗೂ ಹಣಕೊಡುವಂತೆ ಬೇಡಿಕೆ ಇಟ್ಟಿದ್ರು..ಇದೇ ವಿಚಾರಕ್ಕೆ ಅಣ್ಣತಮ್ಮಂದಿರ ನಡುವೆ ನಡೆದ ಗಲಾಟೆಯಲ್ಲಿ ಒಡಹುಟ್ಟಿದ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ..

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ಮಾಡಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ..

ಒಟ್ಟಾರೇ ಹುಟ್ಟುತ್ತ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯದಿಗಳು ಎಂಬಂತೆ ಕೇವಲ ತಾಯಿಯ ಸಾವಿರ ಹಣ ಪಿಂಚಣಿ ಹಣಕ್ಕೆ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವುದು ವಿರ್ಪಯಾಸವಾಗಿದೆ..

Ramesh Babu

Journalist

Recent Posts

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

27 minutes ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

6 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

13 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

1 day ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago