ತಾಯಿಯ ಸಾವಿರ ಹಣ ಪಿಂಚಣಿ ಹಣಕ್ಕೆ ಮೂವರು ಅಣ್ಣತಮ್ಮಂದಿರ ನಡುವೆ ತಗಾದೆ: ಅಣ್ಣನ ಕೊಲೆಯಲ್ಲಿ ಅಂತ್ಯ

ಒಂಭತ್ತು ತಿಂಗಳು ಹೊತ್ತು‌ಹೆತ್ತು ಬೆಳೆಸಿದ ಮಕ್ಕಳು ಮುಪ್ಪಾದಾಗ ತಂದೆ-ತಾಯಿಗೆ ಆಸೆರೆಯಾಗುತ್ತಾರೆ ಎಂಬ ಆಸೆರೆಯಿಂದ ಕೂಲಿನಾಲಿ ಮಾಡಿ ಬೆಳೆಸಿದ್ರು. ಆದ್ರೆ ತಂದೆ ಸತ್ತ ಮೇಳೆ ತಾಯಿಯನ್ನು ನೋಡಿಕೊಳ್ಳಬೇಕಾದ ಮಕ್ಕಳೇ ತಂದೆಗೆ ಬರುವ ಸಾವಿರ ರೂಪಾಯಿ ಪಿಂಚಣಿಗಾಗಿ ಕಿತ್ತಾಡಿ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ…ಇಷ್ಟಕ್ಕೂ ಆ ಘಟನೆ ನಡೆದಿದ್ದು ಎಲ್ಲಿ ಅಂತೀರಾ…

ಹೀಗೆ ತಾಯಿಯ ಪಿಂಚಣಿ ಹಣಕ್ಕಾಗಿ ಸ್ವಂತ ಅಣ್ಣನ ಮನೆಯ ಬಾಗಿಲನ್ನು ಹೊಡೆದಿರುವ ಅಣ್ಣತಮ್ಮಂದಿರು, ಮಕ್ಕಳಿಂದಲೇ ತನ್ನ ಹಿರಿಯ ಮಗನನ್ನು ದೊಣ್ಣೆಗಳಿಂದ ಭೀಕರವಾಗಿ ಕೊಲೆ ಮಾಡಿರುವ ದೃಶ್ಯಗಳು ಕಂಡು ಕಣ್ಣೀರಿಡುತ್ತಿರುವ ತಾಯಿ.. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದಲ್ಲಿ..

ಸ್ವಂತ ತಮ್ಮಂದಿರ ಕೈಯಲ್ಲಿ ಭೀಕರವಾಗಿ ಕೊಲೆಯಾಗಿರುವನ‌ ಹೆಸರು ನರಸಿಂಹಮೂರ್ತಿ.. ಮಾಡಿದೆಲ್ಲಾ ಮಾಡಿ ಅಮಾಯಕರಂತೆ ನಿಂತುಕೊಂಡಿರುವವರ ಹೆಸರು ರಾಮಾಂಜಿ ಹಾಗೂ ಗಂಗಾಧರಪ್ಪ ಇವರಿಬ್ಬರು ಒಡ ಹುಟ್ಟಿದ ಅಣ್ಣತಮ್ಮಂದಿರು..

ಇನ್ನೂ ಗಂಗಮ್ಮ ಹಾಗೂ ಹನುಮಂತರಾಯಪ್ಪ ದಂಪತಿಗಳಿಗೆ ಮೂವರು ಗಂಡು ಮಕ್ಕಳು ಇದ್ರು..ಇನ್ನೂ ಬೆಸ್ಕಾಂ ನಲ್ಲಿ ಲೈನ್ ಮ್ಯಾನ್ ಕೆಲಸ ಮಾಡುತ್ತಿದ್ದ ಹನುಮಂತರಾಯಪ್ಪ ಹಲವು ವರ್ಷಗಳ ಹಿಂದೆ ಮೃತಪಟ್ಟಿದ್ದ..ಮೃತಪಟ್ಟ ನಂತರ ತಂದೆಯ ಪಿಂಚಣಿ ಹಣ ತಾಯಿಗೆ ಬರುತ್ತಿತ್ತು ಇದೆ ಹಣ ವಿಚಾರಕ್ಕೆ ಮೂವರ ಮಕ್ಕಳ ನಡುವೆ ತಗಾದೆ ಶುರುವಾಗಿದೆ..ನಾನೇ ತಾಯಿಯನ್ನು ನೋಡಿಕೊಳ್ಳುತ್ತಿದ್ದು ನನಗೆ ಹಣ ಸೇರಬೇಕು ಎಂದು ಹಠಕ್ಕೆ ಬಿದ್ದಿದ್ದ ನರಸಿಂಹಮೂರ್ತಿ ಹಾಗೂ ರಾಮಾಂಜಿ, ಗಂಗಾಧರಪ್ಪ ನಡುವೆ ಮಾತಿಗೆ ಮಾತು ಬೆಳೆದು ರಾಜಿಪಂಚಾಯತಿಗಳು ನಡೆದಿದೆ…ಆದ್ರೆ ಅಣ್ಣ ನರಸಿಂಹಮೂರ್ತಿ ನಮಗೆ ತಾಯಿಯ ಪಿಂಚಣಿ ಹಣ ನೀಡುವುದಿಲ್ಲಾ ಎಂದು ಕೋಪಗೊಂಡ ರಾಮಾಂಜಿ ಹಾಗೂ ಗಂಗಾಧರಪ್ಪ ನರಸಿಂಹಮೂರ್ತಿ ಮನೆ ಬಳಿ ಹೋಗಿ ಮನೆಯ ಬಾಗಿಲು ಒಡೆದು ಮನೆಯ ಒಳಗೆ ಇದ್ದ ನರಸಿಂಹಮೂರ್ತಿಯನ್ನು ದೊಣ್ಣೆಗಳಿಂದ ಒಡೆದು ಭೀಕರವಾಗಿ ಕೊಲೆ ಮಾಡಿದ್ದಾರೆ..

ಇನ್ನೂ ತಂದೆ ಸತ್ತ ಮೇಲೆ ತಾಯಿಗೆ ಬರುತ್ತಿದ್ದ ಒಂದು ಸಾವಿರ ಪಿಂಚಣಿ ಹಣದಲ್ಲಿ ತನ್ನ ಹಿರಿಯ ಮಗ ನರಸಿಂಹಮೂರ್ತಿಗೆ ಒಂದು ಸಾವಿರ ರೂಪಾಯಿಯನ್ನು ಕೊಟ್ಟಿದ್ಲು..ಇದರಿಂದ ಕುಪಿತಗೊಂಡ ಇಬ್ಬರು ಮಕ್ಕಳು ನಮಗೂ ಹಣಕೊಡುವಂತೆ ಬೇಡಿಕೆ ಇಟ್ಟಿದ್ರು..ಇದೇ ವಿಚಾರಕ್ಕೆ ಅಣ್ಣತಮ್ಮಂದಿರ ನಡುವೆ ನಡೆದ ಗಲಾಟೆಯಲ್ಲಿ ಒಡಹುಟ್ಟಿದ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ..

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ಮಾಡಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ..

ಒಟ್ಟಾರೇ ಹುಟ್ಟುತ್ತ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯದಿಗಳು ಎಂಬಂತೆ ಕೇವಲ ತಾಯಿಯ ಸಾವಿರ ಹಣ ಪಿಂಚಣಿ ಹಣಕ್ಕೆ ಒಡಹುಟ್ಟಿದ ಅಣ್ಣನನ್ನೇ ಕೊಲೆ ಮಾಡಿರುವುದು ವಿರ್ಪಯಾಸವಾಗಿದೆ..

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

4 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago