Categories: ಬೆಳಗಾವಿ

ತಾಯಿ ಜೊತೆ ಅನೈತಿಕ ಸಂಬಂಧ…ನಡು ರಸ್ತೆಯಲ್ಲಿ ಕೊಂದ ಮಗ…ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದ ಹಂತಕ…

ತಾಯಿ ಜೊತೆ ಅಕ್ರಮ ಸಂಭಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಬರೋಬ್ಬರಿ 16 ಬಾರಿ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿದ್ದಾನೆ.

ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ.

ಈರಯ್ಯ ಮಠಪತಿ ಕೊಲೆ ಆರೋಪಿ. ನಿನ್ನೆ ಸಂಜೆ ರಸ್ತೆ ಮಧ್ಯೆ ಬರುತ್ತಿದ್ದ ಬಸಪ್ಪ ಹೊಸಮನಿಯನ್ನ ತಡೆದು ಹತ್ಯೆಗೈದು ಬಳಿಕ ಪೊಲೀಸರಿಗೆ ಕರೆ ಮಾಡಿ‌ ಕೊಲೆ ಮಾಡಿದ್ದಾಗಿ ಈರಯ್ಯ ಮಾಹಿತಿ ನೀಡಿದ್ದಾನೆ.

ಪೊಲೀಸರು ಬರುವವರೆಗೂ ರಸ್ತೆ ಮಧ್ಯೆ ಶವದ ಬೆನ್ನ ಮೇಲೆ ಕಾಲಿಟ್ಟು ನಿಂತಿದ್ದ ಆರೋಪಿ ಈರಯ್ಯನನ್ನ ಸವದತ್ತಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹತ್ತು ವರ್ಷದ ಹಿಂದೆ ಈರಯ್ಯ ತಾಯಿ ಜೊತೆಗೆ ಬಸಪ್ಪ ಓಡಿ ಹೋಗಿದ್ದ. ಮತ್ತೆ ಗ್ರಾಮಕ್ಕೆ ವಾಪಾಸ್ ಬಂದಿದ್ದ. ಇದೇ ದ್ವೇಷ ಇಟ್ಟುಕೊಂಡು ಸಾರ್ವಜನಿಕವಾಗಿ ಹತ್ಯೆ ಮಾಡಿ ಈರಯ್ಯ ಅಟ್ಟಹಾಸ ಮೆರೆದಿದ್ದಾನೆ.

ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

17 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

19 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

1 day ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

1 day ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

1 day ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 day ago