Categories: ಲೇಖನ

ತಾಯ ಗರ್ಭದಿಂದ ಹೊರಬಂದಾಗ, ಕರುಳು ಕತ್ತರಿಸಿದಾಗ ಮೂಡಿದ ಅನಾಥಭಾವ

ತಾಯ ಗರ್ಭದಿಂದುದಯಿಸಿದ ಕ್ಷಣದಿಂದ,

ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ,

ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ…..

ಹಸಿವು ಅಳು ನಗು ಮೊದಲಿನಾ ಅನುಭವಗಳು,

ತಾಯ ಅಪ್ಪುಗೆ, ತಂದೆಯ ಧ್ವನಿ ಗ್ರಹಿಸತೊಡಗಿದೆ,

ಮತ್ತಷ್ಟು ಚಲಿಸುವ ಆಕೃತಿಗಳನ್ನು ಕಂಡೆ,

ಅಕ್ಕ ಅಣ್ಣ ಅಜ್ಜ ಅಜ್ಜಿ ಎಂದರಿವಾಗತೊಡಗಿತು,

ಹಸು ಕರು ಕುರಿ ಕೋಳಿ ನಾಯಿ ಬೆಕ್ಕು ನನ್ನವೆಂದೇ ಭಾವಿಸಿದೆ,

ಅಮ್ಮಾ…ಅಪ್ಪಾ…ಅಜ್ಜೀ…
ತಾತಾ….ಅಣ್ಣಾ..ಅಕ್ಕಾ…
ಎಂದು ತೊದಲತೊಡಗಿದೆ,

ಹಾಲು ಅನ್ನ ಸಿಹಿ ಕಹಿ ಖಾರ ಒಗರು ರುಚಿಸತೊಡಗಿತು,

ಅ ಆ ಇ ಈ A B C D 1 2 3 4 ಅರ್ಥಮಾಡಿಕೊಳ್ಳತೊಡಗಿದೆ,

ಕಪ್ಪು ಬಿಳಿ ನೀಲಿ ಹಸಿರು ಕೆಂಪು ಗುರುತಿಸತೊಡಗಿದೆ,

ಟೀಚರು ಆಯಾ ಡಾಕ್ಟರು ಗೊತ್ತಾಗತೊಡಗಿದರು,

ಬೆಳಕು ನೀರು ಗಿಡ ಮರ ಹೂವು ನನ್ನೊಳಗಿಳಿಯತೊಡಗಿತು,

ಚಳಿ ಗಾಳಿ ಮಳೆ ಬಿಸಿಲು ತಿಳಿಯತೊಡಗಿತು,

ಸೈಕಲ್ಲು ಬೈಕು ಕಾರು ಬಸ್ಸು ರೈಲು ವಿಮಾನ ಆಶ್ಚರ್ಯವನ್ನುಂಟುಮಾಡತೊಡಗಿತು,

ರೇಡಿಯೋ ಟಿವಿ ಕಂಪ್ಯೂಟರು ಮೊಬೈಲುಗಳು ಕುತೂಹಲಕೆರಳಿಸತೊಡಗಿದವು,

ಕೋಪ ಅಸೂಯೆ ಭಯ ಕರುಣೆ ಪ್ರತಿಕ್ಷಣದ ಭಾವನೆಯಾಗತೊಡಗಿತು,

ಗಂಡು ಹೆಣ್ಣಿನ ವ್ಯತ್ಯಾಸ ಅಂತರ್ಗತವಾಗತೊಡಗಿತು,

ಕನ್ನಡ ಇಂಗ್ಲೀಷ್ ಹಿಂದಿ ತೆಲುಗು ತಮಿಳು ಮಲಯಾಳಂ ಭಾಷೆಗಳ ಭಿನ್ನತೆಯೂ ಸ್ಪಷ್ಟವಾಗತೊಡಗಿತು,

ಗೆಳೆಯ ಗೆಳತಿಯರು, ಓದು ಆಟ ನೃತ್ಯ ಸಂಗೀತ ಖುಷಿಕೊಡತೊಡಗಿತು,

ಆಸ್ಪತ್ರೆ ಬ್ಯಾಂಕು ಅಂಗಡಿ ಹೋಟೆಲು ಸಿನಿಮಾ ಮಂದಿರ ಗಮನಕ್ಕೆ ಬರತೊಡಗಿತು,

ನನ್ನೂರು – ಬೆಂಗಳೂರು, ಕರ್ನಾಟಕ ಭಾರತ ಏಷ್ಯಾ ವಿಶ್ವ ಹತ್ತಿರ ಬಂದಂತಾಗತೊಡಗಿತು,

ಕಣ್ಣು ಕಿವಿ ಮೂಗು ಬಾಯಿ ಅದು ಇದು ಅಂಗಗಳ ಬೇಕು ಬೇಡಗಳು ಅನುಭವವಾಗತೊಡಗಿದವು,

ತತ್ವ ಸಿದ್ದಾಂತ ಮೌಲ್ಯ ಕೆಚ್ಚು ಹೋರಾಟ ಗಲಾಟೆ ಪ್ರಚಾರ ಮಹತ್ವಪಡೆಯತೊಡಗಿತು,

ಪ್ರೀತಿಯ ಭಾವ ಚಿಗುರತೊಡಗಿತು,

ಸಂಗಾತಿಯ ಸಾಮಿಪ್ಯಕ್ಕೆ ಮನಸ್ಸು ಜಾರತೊಡಗಿತು,

ಉದ್ಯೋಗ ಜವಾಬ್ದಾರಿ ಭವಿಷ್ಯ ಕಾಡತೊಡಗಿತು,

ಹಣ ಅಂತಸ್ತು ಅಧಿಕಾರ ಐಶ್ವರ್ಯಗಳ ಮೋಹ ಉಂಟಾಗತೊಡಗಿತು,

ನಾನು ನನ್ನದು ನನ್ನವರೆಂಬ ಕುಟುಂಬ ಬೇಕೆನಿಸತೊಡಗಿತು,

ಕಾಮ ಕ್ರೋದ ಲೋಭ ಮೋಹ ಮದ ಮತ್ಸರಗಳ ಸಮ್ಮಿಳಿತವಾಗತೊಡಗಿತು,

ವಂಶಾಭಿವೃದ್ಧಿಯೇ ಒಂದು ಘನಕಾರ್ಯವೆಂದು ಭಾಸವಾಗತೊಡಗಿತು,

ಮಗ ಮಗಳ ಶಿಕ್ಷಣ ಭವಿಷ್ಯ ಸುಖಸಂತೋಷ ಉದ್ಯೋಗವೇ ಬದುಕಿನ ಧ್ಯೇಯವೆಂದೆನಿಸತೊಡಗಿತು,

ಮಗಳಿಗೊಂದು ಮದುವೆ ಮಗನಿಗೊಂದು ಮದುವೆಯೇ ಪ್ರಾಮುಖ್ಯತೆ ಪಡೆಯುವಂತಾಯಿತು,

ಮಗಳು ಅಮೆರಿಕಾ, ಮಗ ಆಸ್ಟ್ರೇಲಿಯಾ ಪಾಲಾದರು,

ರಕ್ತ ಸಂಬಂಧಿಗಳು, ಬಂಧುಬಳಗದವರು, ಸ್ನೇಹಿತರು ಇದ್ದರು, ಎಲ್ಲವೂ ದೂರವಾದಂತೆನಿಸತೊಡಗಿತು,

ಮತ್ತೆ ತಾಯ ಗರ್ಭದಿಂದ ಹೊರಬಂದಾಗ, ಕರುಳು ಕತ್ತರಿಸಿದಾಗ ಮೂಡಿದ ಅನಾಥಭಾವ ಆವರಿಸಿಕೊಳ್ಳತೊಡಗಿತು,

ಸಾವಿನ ಭಯ ಕಾಡತೊಡಗಿತು,

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago