ತಾಲ್ಲೂಕಿಗೆ ಜಿಲ್ಲಾ ಕ್ರೀಡಾಂಗಣ ಮಂಜೂರಾಗಿದ್ದು ಅತ್ಯುತ್ತಮವಾದ ಸಿಂಥೆಟಿಕ್ ಟ್ರ್ಯಾಕ್ ಸಿದ್ಧಪಡಿಸಲು ಶ್ರಮಿಸಲಾಗುವುದು, ತಾಲೂಕಿನ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಗೆಲುವು ಸಾಧಿಸಬೇಕು. ಅಂತಹ ಕ್ರೀಡಾಪಟುಗಳಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಾಗುವುದು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರದ ಭಗತ್ ಸಿಂಗ್ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಗರ ಮತ್ತು ಕಸಬಾ ಹೋಬಳಿಯ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳಲ್ಲಿನ ಪ್ರತಿಭೆ ಹೊರಬರಲು ಕ್ರೀಡೆ ಸಹಕಾರಿಯಾಗಿರುತ್ತದೆ. ಶೈಕ್ಷಣಿಕ ಬೆಳವಣಿಗೆಗೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಓದುವಂತ ಸಮಯದಲ್ಲಿ ಕೇವಲ ವಿದ್ಯೆ ಮೇಲೆ ಗಮನವಿರಲಿ. ಹೆಚ್ಚಿನ ಅಭ್ಯಾಸ ಮಾಡುವ ಮೂಲಕ ಪ್ರತಿಫಲ ಇದ್ದೆ ಇರುತ್ತದೆ ಎಂದರು.
ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ಕ್ರೀಡಾಮನೋಬಾವದಿಂದ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೇರೆಯುವುದು ವಿದ್ಯಾರ್ಥಿಗಳು ಅರಿತುಕೊಂಡು ಅಳವಡಿಸಿಕೊಳ್ಳಬೇಕು. ಇದು ಶೈಕ್ಷಣಿಕ ಮತ್ತು ಉತ್ತಮ ಜೀವನಕ್ಕೆ ನಾಂದಿಯಾಗುತ್ತದೆ ಕಿವಿಮಾತು ಹೇಳಿದರು.
ಈ ವೇಳೆ ಟಿಎಪಿಎಂಸಿಎಸ್ ಅಧ್ಯಕ್ಷ
ಆಂಜನಗೌಡ, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ ತಾಜ್, ಬಿಇಓ ರಂಗಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೈಕುಮಾರ್, ದೈಹಿಕ ಶಿಕ್ಷಕರ ಸಂಘದ ಬರಗೂರು ನರಸಿಂಹಮೂರ್ತಿ, ದೈಹಿಕ ಶಿಕ್ಷಕರು, ನಗರಸಭಾ ಸದಸ್ಯರು ಇದ್ದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…