ತಾಲ್ಲೂಕಿಗೆ ಜಿಲ್ಲಾ ಕ್ರೀಡಾಂಗಣ ಮಂಜೂರಾಗಿದ್ದು ಅತ್ಯುತ್ತಮವಾದ ಸಿಂಥೆಟಿಕ್ ಟ್ರ್ಯಾಕ್ ಸಿದ್ಧಪಡಿಸಲು ಶ್ರಮಿಸಲಾಗುವುದು, ತಾಲೂಕಿನ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಗೆಲುವು ಸಾಧಿಸಬೇಕು. ಅಂತಹ ಕ್ರೀಡಾಪಟುಗಳಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಾಗುವುದು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರದ ಭಗತ್ ಸಿಂಗ್ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಗರ ಮತ್ತು ಕಸಬಾ ಹೋಬಳಿಯ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳಲ್ಲಿನ ಪ್ರತಿಭೆ ಹೊರಬರಲು ಕ್ರೀಡೆ ಸಹಕಾರಿಯಾಗಿರುತ್ತದೆ. ಶೈಕ್ಷಣಿಕ ಬೆಳವಣಿಗೆಗೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಓದುವಂತ ಸಮಯದಲ್ಲಿ ಕೇವಲ ವಿದ್ಯೆ ಮೇಲೆ ಗಮನವಿರಲಿ. ಹೆಚ್ಚಿನ ಅಭ್ಯಾಸ ಮಾಡುವ ಮೂಲಕ ಪ್ರತಿಫಲ ಇದ್ದೆ ಇರುತ್ತದೆ ಎಂದರು.
ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ಕ್ರೀಡಾಮನೋಬಾವದಿಂದ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೇರೆಯುವುದು ವಿದ್ಯಾರ್ಥಿಗಳು ಅರಿತುಕೊಂಡು ಅಳವಡಿಸಿಕೊಳ್ಳಬೇಕು. ಇದು ಶೈಕ್ಷಣಿಕ ಮತ್ತು ಉತ್ತಮ ಜೀವನಕ್ಕೆ ನಾಂದಿಯಾಗುತ್ತದೆ ಕಿವಿಮಾತು ಹೇಳಿದರು.
ಈ ವೇಳೆ ಟಿಎಪಿಎಂಸಿಎಸ್ ಅಧ್ಯಕ್ಷ
ಆಂಜನಗೌಡ, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ ತಾಜ್, ಬಿಇಓ ರಂಗಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೈಕುಮಾರ್, ದೈಹಿಕ ಶಿಕ್ಷಕರ ಸಂಘದ ಬರಗೂರು ನರಸಿಂಹಮೂರ್ತಿ, ದೈಹಿಕ ಶಿಕ್ಷಕರು, ನಗರಸಭಾ ಸದಸ್ಯರು ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…