ತಾಲ್ಲೂಕಿಗೆ ಜಿಲ್ಲಾ ಕ್ರೀಡಾಂಗಣ ಮಂಜೂರಾಗಿದ್ದು ಅತ್ಯುತ್ತಮವಾದ ಸಿಂಥೆಟಿಕ್ ಟ್ರ್ಯಾಕ್ ಸಿದ್ಧಪಡಿಸಲು ಶ್ರಮಿಸಲಾಗುವುದು, ತಾಲೂಕಿನ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಗೆಲುವು ಸಾಧಿಸಬೇಕು. ಅಂತಹ ಕ್ರೀಡಾಪಟುಗಳಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಾಗುವುದು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ನಗರದ ಭಗತ್ ಸಿಂಗ್ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಗರ ಮತ್ತು ಕಸಬಾ ಹೋಬಳಿಯ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳಲ್ಲಿನ ಪ್ರತಿಭೆ ಹೊರಬರಲು ಕ್ರೀಡೆ ಸಹಕಾರಿಯಾಗಿರುತ್ತದೆ. ಶೈಕ್ಷಣಿಕ ಬೆಳವಣಿಗೆಗೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಓದುವಂತ ಸಮಯದಲ್ಲಿ ಕೇವಲ ವಿದ್ಯೆ ಮೇಲೆ ಗಮನವಿರಲಿ. ಹೆಚ್ಚಿನ ಅಭ್ಯಾಸ ಮಾಡುವ ಮೂಲಕ ಪ್ರತಿಫಲ ಇದ್ದೆ ಇರುತ್ತದೆ ಎಂದರು.
ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ಕ್ರೀಡಾಮನೋಬಾವದಿಂದ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೇರೆಯುವುದು ವಿದ್ಯಾರ್ಥಿಗಳು ಅರಿತುಕೊಂಡು ಅಳವಡಿಸಿಕೊಳ್ಳಬೇಕು. ಇದು ಶೈಕ್ಷಣಿಕ ಮತ್ತು ಉತ್ತಮ ಜೀವನಕ್ಕೆ ನಾಂದಿಯಾಗುತ್ತದೆ ಕಿವಿಮಾತು ಹೇಳಿದರು.
ಈ ವೇಳೆ ಟಿಎಪಿಎಂಸಿಎಸ್ ಅಧ್ಯಕ್ಷ
ಆಂಜನಗೌಡ, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ ತಾಜ್, ಬಿಇಓ ರಂಗಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೈಕುಮಾರ್, ದೈಹಿಕ ಶಿಕ್ಷಕರ ಸಂಘದ ಬರಗೂರು ನರಸಿಂಹಮೂರ್ತಿ, ದೈಹಿಕ ಶಿಕ್ಷಕರು, ನಗರಸಭಾ ಸದಸ್ಯರು ಇದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…