ತಾಲೂಕಿನಲ್ಲಿ ಅಕ್ರಮ ಬಡಾವಣೆಗಳ ಹಾವಳಿ ಹೆಚ್ಚಾಗಿ ಭೂ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ, ಭೂ ಮಾಫಿಯಾದವರು ಭೂ ಉದ್ದೇಶ ಬದಲಾವಣೆ ಮಾಡಿ ಭೂ ಪರಿವರ್ತನೆಗೊಳಿಸಿ ಪಂಚಾಯಿತಿಗಳಲ್ಲಿ ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಕನ್ನಡ ಪರ ಸಂಘಟನೆ ಒಕ್ಕೂಟದ ಜಿಲ್ಲಾಧ್ಯಕ್ಷ ಎ.ನಂಜಪ್ಪ ಆರೋಪ ಮಾಡಿದರು.
ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಎದುರು ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ತುಂಬಾ ನಷ್ಟವನ್ನುಂಟು ಮಾಡಲಾಗುತ್ತಿದೆ. ಅದೇರೀತಿ ಜನಸಾಮಾನ್ಯರಿಗೂ ಕೂಡ ಮೋಸ ಮಾಡಲಾಗಿತ್ತಿದೆ ಎಂದರಲ್ಲದೆ ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೆ ಬಡಾವಣೆಗಳನ್ನ ನಿರ್ಮಿಸಿ ಮಾರಾಟ ಮಾಡುತ್ತಿರುವ ಭೂಮಾಫಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು.
ಈ ವೇಳೆ ವಿವಿಧ ಸಂಘಟನೆಗಳ ಸದಸ್ಯರು, ಹೋರಾಟಗಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…