ತಾಲೂಕಿನಲ್ಲಿ ಅಕ್ರಮ ಬಡಾವಣೆ ಹಾವಳಿ; ಅಕ್ರಮ ಬಡಾವಣೆಗಳ ತೆರವಿಗೆ ಆಗ್ರಹ: ಭೂ ಪರಿವರ್ತನೆಗೊಳಿಸಿ ಉಂಡೆ ಖಾತೆ ಆರೋಪ

ತಾಲೂಕಿನಲ್ಲಿ ಅಕ್ರಮ ಬಡಾವಣೆಗಳ ಹಾವಳಿ ಹೆಚ್ಚಾಗಿ ಭೂ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ, ಭೂ ಮಾಫಿಯಾದವರು ಭೂ ಉದ್ದೇಶ ಬದಲಾವಣೆ ಮಾಡಿ ಭೂ ಪರಿವರ್ತನೆಗೊಳಿಸಿ ಪಂಚಾಯಿತಿಗಳಲ್ಲಿ ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಕನ್ನಡ ಪರ ಸಂಘಟನೆ ಒಕ್ಕೂಟದ ಜಿಲ್ಲಾಧ್ಯಕ್ಷ ಎ.ನಂಜಪ್ಪ ಆರೋಪ ಮಾಡಿದರು.

ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಎದುರು ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ತುಂಬಾ ನಷ್ಟವನ್ನುಂಟು ಮಾಡಲಾಗುತ್ತಿದೆ. ಅದೇರೀತಿ ಜನಸಾಮಾನ್ಯರಿಗೂ ಕೂಡ ಮೋಸ ಮಾಡಲಾಗಿತ್ತಿದೆ ಎಂದರಲ್ಲದೆ ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೆ ಬಡಾವಣೆಗಳನ್ನ ನಿರ್ಮಿಸಿ ಮಾರಾಟ ಮಾಡುತ್ತಿರುವ ಭೂಮಾಫಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು.

ನಂತರ ಸ್ಥಳಕ್ಕೆ ಆಗಮಿಸಿದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್, ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಕೂಡಲೇ ಈ ಕುರಿತು ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ವಿವಿಧ ಸಂಘಟನೆಗಳ ಸದಸ್ಯರು, ಹೋರಾಟಗಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

4 minutes ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

4 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

5 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

7 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

7 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

11 hours ago