ತಾಲೂಕಿನಲ್ಲಿ ಅಕ್ರಮ ಬಡಾವಣೆ ಹಾವಳಿ; ಅಕ್ರಮ ಬಡಾವಣೆಗಳ ತೆರವಿಗೆ ಆಗ್ರಹ: ಭೂ ಪರಿವರ್ತನೆಗೊಳಿಸಿ ಉಂಡೆ ಖಾತೆ ಆರೋಪ

ತಾಲೂಕಿನಲ್ಲಿ ಅಕ್ರಮ ಬಡಾವಣೆಗಳ ಹಾವಳಿ ಹೆಚ್ಚಾಗಿ ಭೂ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ, ಭೂ ಮಾಫಿಯಾದವರು ಭೂ ಉದ್ದೇಶ ಬದಲಾವಣೆ ಮಾಡಿ ಭೂ ಪರಿವರ್ತನೆಗೊಳಿಸಿ ಪಂಚಾಯಿತಿಗಳಲ್ಲಿ ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಕನ್ನಡ ಪರ ಸಂಘಟನೆ ಒಕ್ಕೂಟದ ಜಿಲ್ಲಾಧ್ಯಕ್ಷ ಎ.ನಂಜಪ್ಪ ಆರೋಪ ಮಾಡಿದರು.

ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಎದುರು ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ತುಂಬಾ ನಷ್ಟವನ್ನುಂಟು ಮಾಡಲಾಗುತ್ತಿದೆ. ಅದೇರೀತಿ ಜನಸಾಮಾನ್ಯರಿಗೂ ಕೂಡ ಮೋಸ ಮಾಡಲಾಗಿತ್ತಿದೆ ಎಂದರಲ್ಲದೆ ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೆ ಬಡಾವಣೆಗಳನ್ನ ನಿರ್ಮಿಸಿ ಮಾರಾಟ ಮಾಡುತ್ತಿರುವ ಭೂಮಾಫಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು.

ನಂತರ ಸ್ಥಳಕ್ಕೆ ಆಗಮಿಸಿದ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎಂ.ಶ್ರೀನಿವಾಸ್, ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಕೂಡಲೇ ಈ ಕುರಿತು ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವೇಳೆ ವಿವಿಧ ಸಂಘಟನೆಗಳ ಸದಸ್ಯರು, ಹೋರಾಟಗಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

3 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago