ತಾಲೂಕಿನಲ್ಲಿ ಅಕ್ರಮ ಬಡಾವಣೆಗಳ ಹಾವಳಿ ಹೆಚ್ಚಾಗಿ ಭೂ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ, ಭೂ ಮಾಫಿಯಾದವರು ಭೂ ಉದ್ದೇಶ ಬದಲಾವಣೆ ಮಾಡಿ ಭೂ ಪರಿವರ್ತನೆಗೊಳಿಸಿ ಪಂಚಾಯಿತಿಗಳಲ್ಲಿ ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಕನ್ನಡ ಪರ ಸಂಘಟನೆ ಒಕ್ಕೂಟದ ಜಿಲ್ಲಾಧ್ಯಕ್ಷ ಎ.ನಂಜಪ್ಪ ಆರೋಪ ಮಾಡಿದರು.
ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಎದುರು ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ತುಂಬಾ ನಷ್ಟವನ್ನುಂಟು ಮಾಡಲಾಗುತ್ತಿದೆ. ಅದೇರೀತಿ ಜನಸಾಮಾನ್ಯರಿಗೂ ಕೂಡ ಮೋಸ ಮಾಡಲಾಗಿತ್ತಿದೆ ಎಂದರಲ್ಲದೆ ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೆ ಬಡಾವಣೆಗಳನ್ನ ನಿರ್ಮಿಸಿ ಮಾರಾಟ ಮಾಡುತ್ತಿರುವ ಭೂಮಾಫಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು.
ಈ ವೇಳೆ ವಿವಿಧ ಸಂಘಟನೆಗಳ ಸದಸ್ಯರು, ಹೋರಾಟಗಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…