ತಾಲೂಕಿನಲ್ಲಿ ಅಕ್ರಮ ಬಡಾವಣೆಗಳ ಹಾವಳಿ ಹೆಚ್ಚಾಗಿ ಭೂ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ, ಭೂ ಮಾಫಿಯಾದವರು ಭೂ ಉದ್ದೇಶ ಬದಲಾವಣೆ ಮಾಡಿ ಭೂ ಪರಿವರ್ತನೆಗೊಳಿಸಿ ಪಂಚಾಯಿತಿಗಳಲ್ಲಿ ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಕನ್ನಡ ಪರ ಸಂಘಟನೆ ಒಕ್ಕೂಟದ ಜಿಲ್ಲಾಧ್ಯಕ್ಷ ಎ.ನಂಜಪ್ಪ ಆರೋಪ ಮಾಡಿದರು.
ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಎದುರು ಕನ್ನಡ ಪರ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಉಂಡೆ ಖಾತೆ ಮಾಡಿಸಿ ಮಾರಾಟ ಮಾಡುತ್ತಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ತುಂಬಾ ನಷ್ಟವನ್ನುಂಟು ಮಾಡಲಾಗುತ್ತಿದೆ. ಅದೇರೀತಿ ಜನಸಾಮಾನ್ಯರಿಗೂ ಕೂಡ ಮೋಸ ಮಾಡಲಾಗಿತ್ತಿದೆ ಎಂದರಲ್ಲದೆ ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೆ ಬಡಾವಣೆಗಳನ್ನ ನಿರ್ಮಿಸಿ ಮಾರಾಟ ಮಾಡುತ್ತಿರುವ ಭೂಮಾಫಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದರು.
ಈ ವೇಳೆ ವಿವಿಧ ಸಂಘಟನೆಗಳ ಸದಸ್ಯರು, ಹೋರಾಟಗಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…