ತಾಲೂಕಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ: ಖಚಿತ ಮಾಹಿತಿ ಮೇರೆಗೆ ರೀಫಿಲ್ಲಿಂಗ್ ಅಡ್ಡೆ ಮೇಲೆ ನಗರ ಹಾಗೂ ಗ್ರಾಮಾಂತರ ಪೊಲೀಸರ ದಾಳಿ: ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್, ರೀಫಿಲ್ಲಿಂಗ್ ಸಾಧನಗಳ ವಶ

ತಾಲೂಕಿನಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಗಳು ಮೀತಿ ಮೀರುತ್ತಿರುವ ಆರೋಪದ ಬೆನ್ನಲ್ಲೆ ಪೊಲೀಸರು ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.

ಶನಿವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ರವಿ ಅವರ ನೇತೃತ್ವದಲ್ಲಿ, ನಗರ ಠಾಣಾ ಇನ್ಸ್ಪೆಕ್ಟರ್ ದಯಾನಂದ್, ಗ್ರಾಮಾಂತರ ಠಾಣಾ ಸಾಧಿಕ್ ಪಾಷಾ ಹಾಗೂ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.

ಅಪಾರ ಪ್ರಮಾಣದ ಗ್ಯಾಸ್ ಸಿಲಿಂಡರ್, ರೀಫಿಲ್ಲಿಂಗ್ ಸಾಧನಗಳು ಐದು ವಾಹನಗಳು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಗರದ ಹೊರವಲಯದಲ್ಲಿರುವ ಕೊಡಿಗೇಹಳ್ಳಿ ಗ್ರಾಮದ ಹಿಂಭಾಗ ಹಾದು ಹೋಗಿರುವ ಹೆದ್ದಾರಿ ಪಕ್ಕದಲ್ಲಿರುವ ತೋಟದ ಗೋಡೌನ್ ನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಲಾಗಿದೆ.

ದಾಳಿಯ ಸಂದರ್ಭದಲ್ಲಿ ಅಕ್ರಮವಾಗಿ ಗೃಹಬಳಕೆ ಸಿಲಿಂಡರ್ ನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಗಳಿಗೆ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು ಎನ್ನಲಾಗಿದೆ.

ದಾಳಿಯ ವೇಳೆ 400 ಕ್ಕೂ ಹೆಚ್ಚು ಸಿಲಿಂಡರ್, ರೀಫಿಲ್ಲಿಂಗ್ ಮಾಡಲು ಬಳಸುವ ಸಾಧನಗಳು, 5 ವಾಹನಗಳು ಪತ್ತೆಯಾಗಿವೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ 10 ಮಂದಿ ಕೆಲಸ ಮಾಡುತ್ತಿದ್ದು, ಪೊಲೀಸರ ಕಂಡು ಕೆಲವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದಾಳಿ ನಡೆದಿದೆ.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

7 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

15 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

16 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago