ಬಾಲ್ಯ ವಿವಾಹ ತಡೆಯಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು- ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಪಂದಿಸಿ ಬಾಲ್ಯ ವಿವಾಹ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಮೇಲ್ವಿಚಾರಣೆ ಸಮಿತಿ, ಪೋಷಣ್ ಅಭಿಯಾನ ಸಮನ್ವಯ ಸಮಿತಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ರಕ್ಷಣೆ 2005-2006, ಬಾಲ್ಯ ವಿವಾಹ ನಿಷೇಧ ಸಮಿತಿ ಸಭೆ ಸೇರಿದಂತೆ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಡಿ ಜಿಲ್ಲೆಯಲ್ಲಿ 2024ರ ಏಪ್ರಿಲ್ ಮಾಹೆಯಿಂದ ಆಗಸ್ಟ್ ಮಾಹೆಯವರೆಗೆ ಒಟ್ಟು-16 ಪ್ರಕರಣಗಳು ದಾಖಲಾಗಿದೆ. ಈ ಪೈಕಿ ದೇವನಹಳ್ಳಿಯಲ್ಲಿ 06, ದೊಡ್ಡಬಳ್ಳಾಪುರ 09, ಹೊಸಕೋಟೆಯಲ್ಲಿ 01 ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲಾಗಿದೆ. ಜಿಲ್ಲೆಯ ಪ್ರತಿ ಮನೆಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕಾನೂನುಗಳ ಕರಪತ್ರವನ್ನು ಹಂಚುವ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತಂತೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನದ ಭಾಗವಾಗಿರುವ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು ಎಂದರು.

*ಸಾರ್ವಜನಿಕರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೊಲೀಸ್ ಸಹಾಯವಾಣಿ 112 ಮತ್ತು ಮಕ್ಕಳ ರಕ್ಷಣಾ ಘಟಕ 080-29560034 ಹಾಗೂ ಸಂಬಂಧಪಟ್ಟ ಪೊಲೀಸ್‌ ಠಾಣೆ ಅವರ ಗಮನಕ್ಕೆ ತುರ್ತಾಗಿ ತರಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ತಿಳಿಸಿದರು*

ಜಿಲ್ಲೆಯಲ್ಲಿ ಒಟ್ಟು 1277 ಅಂಗನವಾಡಿ ಕೇಂದ್ರಗಳಿದ್ದು, 999 ಸ್ವಂತ ಅಂಗನವಾಡಿ ಕಟ್ಟಡಗಳು, 04 ಪಂಚಾಯಿತಿ ಕಟ್ಟಡಗಳಲ್ಲಿ, 50 ಅಂಗನವಾಡಿಗಳು ಸಮುದಾಯ ಭವನದಲ್ಲಿ, 88 ಅಂಗನವಾಡಿಗಳು ಶಾಲೆಗಳಲ್ಲಿ ಹಾಗೂ 132 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಿ ಸಿ.ಎಸ್.ಆರ್ ಅನುದಾನದಡಿ ಅಂಗನವಾಡಿ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ, ವಿದ್ಯುತ್, ನೀರು ಸೇರಿದಂತೆ ಮೂಲ ಸೌಕರ್ಯಕ್ಕೆ ತೊಂದರೆ ಆಗದಂತೆ ಕ್ರಮ ವಹಿಸಿ ಎಂದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಠಿಕ ಆಹಾರ ನೀಡಿ ಅವರನ್ನು ಸದೃಢರನ್ನಾಗಿಸಬೇಕು ಎಂದರಲ್ಲದೆ ಐ.ಸಿ.ಡಿ.ಎಸ್ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.

ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ, ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸಬೇಕು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ರಡಿ ನಿಯಮ ಪ್ರಸಕ್ತ ಸಾಲಿನಲ್ಲಿ ಸಖಿ ಯೋಜನೆಯ ಅಡಿ ದಾಖಲಾದ 94 ಪ್ರಕರಣಗಳಲ್ಲಿ 83 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ. ಸಂರಕ್ಷಣಾಧಿಕಾರಿಗಳ ಹಂತದಲ್ಲಿ ದಾಖಲಾದ 17 ಪ್ರಕರಣಗಳಲ್ಲಿ 11 ಪ್ರಕರಣಗಳನ್ನು ಸಮಾಲೋಚನೆಯಿಂದ ಇತ್ಯರ್ಥಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಪ್ರಾಧಿಕಾರ ಸದಸ್ಯರಾದ ನ್ಯಾಯಮೂರ್ತಿ ಬೋಲಾ ಪಂಡಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಾದ ಅನೀತಾಲಕ್ಷ್ಮೀ, ಹೊಸಕೋಟೆ ವಿಭಾಗದ ಡಿವೈಎಸ್ಪಿ ಶಂಕಗೌಡ ಅಣ್ಣಾ ಸಾಹೇಬ್ ಪಾಟೀಲ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

3 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

5 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

9 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

10 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

12 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

12 hours ago