ತಾಲೂಕಿನಲ್ಲಿ ಒಂದು ಸಾವಿರ ಪಡಿತರ ಚೀಟಿ ರದ್ದು: ತಾಲೂಕು ಬಿಜೆಪಿ ಘಟಕ ಪ್ರತಿಭಟನೆ

ರಾಜ್ಯದಲ್ಲಿ 22 ಲಕ್ಷ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿಗಳನ್ನು ರದ್ದು ಮಾಡಿರುವುದನ್ನ ಖಂಡಿಸಿ ತಾಲೂಕು ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಬಿಜೆಪಿ ಘಟಕದ ವತಿಯಿಂದ ಗ್ಯಾರೆಂಟಿ ಯೋಜನೆಗಳ ವಿಫಲ ಹಾಗೂ ಪಡಿತರ ಚೀಟಿ ರದ್ದು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಆಹಾರ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕು ಜನತೆಯ ಒಟ್ಟು 1000 (ಒಂದು ಸಾವಿರ) ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗಿದೆ. ತಾಲ್ಲೂಕಿನಲ್ಲಿ ವಾಸಿಸುವಂತಹ ಜನರು ಮಧ್ಯಮ ವರ್ಗ, ಹಾಗೂ ಬಡತನ ರೇಖೆಯನ್ನು ಹೊಂದಿರುವ ಜನರು ವಾಸವಿರುತ್ತಾರೆ. ಅಂತವರ ಪಡಿತರ ಚೀಟಿಯನ್ನು ರದ್ದುಗೊಳಿಸುವ ಮೂಲಕ ಅವರಿಗೆ ತೊಂದರೆಯನ್ನು ನೀಡುತ್ತಿರುವುದು ಖಂಡನೀಯ. ಆದ್ದರಿಂದ ಕೂಲಂಕುಷವಾಗಿ ಪರಿಶೀಲಿಸಿ ಅರ್ಹ ಹಾಗೂ ಮಧ್ಯಮ ವರ್ಗ, ಹಾಗೂ ಬಡತನ ರೇಖೆಯನ್ನು ಹೊಂದಿರುವ ಜನರಿಗೆ ಬಿ ಪಿ ಎಲ್ ಪಟಿತರ ಚೀಟಿಯನ್ನು ನೀಡಬೇಕು ಎಂದು ಆಗ್ರಹಿಸಿದರು.

ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ, 10 ಕೆ.ಜಿ. ಅಕ್ಕಿ ನೀಡಿಲ್ಲ, ಯುವನಿಧಿ ತಲುಪಿಲ್ಲ, ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ. ಅಂಗನವಾಡಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ವಾಲ್ಮೀಕಿ ನಿಗಮದ ನೌಕರರಿಗೆ ಸಂಬಳ ಬಂದಿಲ್ಲ. ಇಂತಹ ಜನ ವಿರೋಧಿ ನೀತಿಯನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ನಂತರ ಈ ಕುರಿತು ಪರಿಶೀಲಿಸಿ ಕ್ರಮ‌ ಕೈಗೊಳ್ಳುವಂತೆ ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೇ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂತಿ ವೆಂಟಕೇಶ್, ಕಾಡನೂರು ಪಂಚಾಯಿತಿ ಅಧ್ಯಕ್ಷ ಮನು ನಗರ ಸಭಾ ಸದಸ್ಯೆ ವತ್ಸಲ, ಬಿಜೆಪಿ ಮುಖಂಡರಾದ ಮುದ್ದಪ್ಪ, ಪ್ರಿಯಾಂಕ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

15 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 day ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 days ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago