ತಾಲೂಕಿನಲ್ಲಿ ಒಂದು ಸಾವಿರ ಪಡಿತರ ಚೀಟಿ ರದ್ದು: ತಾಲೂಕು ಬಿಜೆಪಿ ಘಟಕ ಪ್ರತಿಭಟನೆ

ರಾಜ್ಯದಲ್ಲಿ 22 ಲಕ್ಷ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿಗಳನ್ನು ರದ್ದು ಮಾಡಿರುವುದನ್ನ ಖಂಡಿಸಿ ತಾಲೂಕು ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಬಿಜೆಪಿ ಘಟಕದ ವತಿಯಿಂದ ಗ್ಯಾರೆಂಟಿ ಯೋಜನೆಗಳ ವಿಫಲ ಹಾಗೂ ಪಡಿತರ ಚೀಟಿ ರದ್ದು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಆಹಾರ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕು ಜನತೆಯ ಒಟ್ಟು 1000 (ಒಂದು ಸಾವಿರ) ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗಿದೆ. ತಾಲ್ಲೂಕಿನಲ್ಲಿ ವಾಸಿಸುವಂತಹ ಜನರು ಮಧ್ಯಮ ವರ್ಗ, ಹಾಗೂ ಬಡತನ ರೇಖೆಯನ್ನು ಹೊಂದಿರುವ ಜನರು ವಾಸವಿರುತ್ತಾರೆ. ಅಂತವರ ಪಡಿತರ ಚೀಟಿಯನ್ನು ರದ್ದುಗೊಳಿಸುವ ಮೂಲಕ ಅವರಿಗೆ ತೊಂದರೆಯನ್ನು ನೀಡುತ್ತಿರುವುದು ಖಂಡನೀಯ. ಆದ್ದರಿಂದ ಕೂಲಂಕುಷವಾಗಿ ಪರಿಶೀಲಿಸಿ ಅರ್ಹ ಹಾಗೂ ಮಧ್ಯಮ ವರ್ಗ, ಹಾಗೂ ಬಡತನ ರೇಖೆಯನ್ನು ಹೊಂದಿರುವ ಜನರಿಗೆ ಬಿ ಪಿ ಎಲ್ ಪಟಿತರ ಚೀಟಿಯನ್ನು ನೀಡಬೇಕು ಎಂದು ಆಗ್ರಹಿಸಿದರು.

ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ, 10 ಕೆ.ಜಿ. ಅಕ್ಕಿ ನೀಡಿಲ್ಲ, ಯುವನಿಧಿ ತಲುಪಿಲ್ಲ, ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ. ಅಂಗನವಾಡಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ವಾಲ್ಮೀಕಿ ನಿಗಮದ ನೌಕರರಿಗೆ ಸಂಬಳ ಬಂದಿಲ್ಲ. ಇಂತಹ ಜನ ವಿರೋಧಿ ನೀತಿಯನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ನಂತರ ಈ ಕುರಿತು ಪರಿಶೀಲಿಸಿ ಕ್ರಮ‌ ಕೈಗೊಳ್ಳುವಂತೆ ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೇ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂತಿ ವೆಂಟಕೇಶ್, ಕಾಡನೂರು ಪಂಚಾಯಿತಿ ಅಧ್ಯಕ್ಷ ಮನು ನಗರ ಸಭಾ ಸದಸ್ಯೆ ವತ್ಸಲ, ಬಿಜೆಪಿ ಮುಖಂಡರಾದ ಮುದ್ದಪ್ಪ, ಪ್ರಿಯಾಂಕ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

6 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago