ತಾಲೂಕಿನಲ್ಲಿ ಒಂದು ಸಾವಿರ ಪಡಿತರ ಚೀಟಿ ರದ್ದು: ತಾಲೂಕು ಬಿಜೆಪಿ ಘಟಕ ಪ್ರತಿಭಟನೆ

ರಾಜ್ಯದಲ್ಲಿ 22 ಲಕ್ಷ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿಗಳನ್ನು ರದ್ದು ಮಾಡಿರುವುದನ್ನ ಖಂಡಿಸಿ ತಾಲೂಕು ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಬಿಜೆಪಿ ಘಟಕದ ವತಿಯಿಂದ ಗ್ಯಾರೆಂಟಿ ಯೋಜನೆಗಳ ವಿಫಲ ಹಾಗೂ ಪಡಿತರ ಚೀಟಿ ರದ್ದು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಆಹಾರ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕು ಜನತೆಯ ಒಟ್ಟು 1000 (ಒಂದು ಸಾವಿರ) ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗಿದೆ. ತಾಲ್ಲೂಕಿನಲ್ಲಿ ವಾಸಿಸುವಂತಹ ಜನರು ಮಧ್ಯಮ ವರ್ಗ, ಹಾಗೂ ಬಡತನ ರೇಖೆಯನ್ನು ಹೊಂದಿರುವ ಜನರು ವಾಸವಿರುತ್ತಾರೆ. ಅಂತವರ ಪಡಿತರ ಚೀಟಿಯನ್ನು ರದ್ದುಗೊಳಿಸುವ ಮೂಲಕ ಅವರಿಗೆ ತೊಂದರೆಯನ್ನು ನೀಡುತ್ತಿರುವುದು ಖಂಡನೀಯ. ಆದ್ದರಿಂದ ಕೂಲಂಕುಷವಾಗಿ ಪರಿಶೀಲಿಸಿ ಅರ್ಹ ಹಾಗೂ ಮಧ್ಯಮ ವರ್ಗ, ಹಾಗೂ ಬಡತನ ರೇಖೆಯನ್ನು ಹೊಂದಿರುವ ಜನರಿಗೆ ಬಿ ಪಿ ಎಲ್ ಪಟಿತರ ಚೀಟಿಯನ್ನು ನೀಡಬೇಕು ಎಂದು ಆಗ್ರಹಿಸಿದರು.

ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ, 10 ಕೆ.ಜಿ. ಅಕ್ಕಿ ನೀಡಿಲ್ಲ, ಯುವನಿಧಿ ತಲುಪಿಲ್ಲ, ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ. ಅಂಗನವಾಡಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ವಾಲ್ಮೀಕಿ ನಿಗಮದ ನೌಕರರಿಗೆ ಸಂಬಳ ಬಂದಿಲ್ಲ. ಇಂತಹ ಜನ ವಿರೋಧಿ ನೀತಿಯನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ನಂತರ ಈ ಕುರಿತು ಪರಿಶೀಲಿಸಿ ಕ್ರಮ‌ ಕೈಗೊಳ್ಳುವಂತೆ ತಹಶಿಲ್ದಾರ್ ವಿಭಾ ವಿದ್ಯಾ ರಾಠೋಡ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೇ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂತಿ ವೆಂಟಕೇಶ್, ಕಾಡನೂರು ಪಂಚಾಯಿತಿ ಅಧ್ಯಕ್ಷ ಮನು ನಗರ ಸಭಾ ಸದಸ್ಯೆ ವತ್ಸಲ, ಬಿಜೆಪಿ ಮುಖಂಡರಾದ ಮುದ್ದಪ್ಪ, ಪ್ರಿಯಾಂಕ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

7 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

15 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago