ತಾಲೂಕಿನಲ್ಲಿ ಕುಂಠಿತಗೊಂಡಿರೋ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಚಿವರಲ್ಲಿ ಮನವಿ- ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ

 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 207 ಕಾಮಾಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಬೀರಸಂದ್ರದ ಜಿಲ್ಲಾಡಳಿತವ ಭವನದಲ್ಲಿ ಈ‌ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲು ಬಂದ ಸಚಿವರು ಆತ್ಮೀಯವಾಗಿ ಬರ ಮಾಡಿಕೊಂಡ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಎಸ್ ಟಿ‌ ಘಟಕದ ಮುಖಂಡರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ತಾಲೂಕಿನಲ್ಲಿ ಕುಂಠಿತಗೊಂಡಿರುವ ಲೋಕೋಪಯೋಗಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಹೋಗುವವರು ಹೆಚ್ಚಿನದಾಗಿ ಕುಂದಾಣ ವೃತ್ತ, ಚಪ್ಪರದಕಲ್ಲು, ಅರುವನಹಳ್ಳಿ, ರಾಮನಾಥಪುರ, ರಬ್ಬನಹಳ್ಳಿ, ಹೆಗ್ಗಡಿಹಳ್ಳಿ ರಸ್ತೆಗಳನ್ನು ಬಳಸುತ್ತಿರುವುದರಿಂದ ರಸ್ತೆ ಹಾಳಾಗಿ, ವಾಹನ ದಟ್ಟಣೆ ಹೆಚ್ಚಾಗಿದೆ, ಹಳ್ಳಿಗರಿಗೆ ತೀವ್ರ ತೊಂದರೆ ಆಗಿದೆ. ಇದರಿಂದ ರಸ್ತೆ ಅಗಲೀಕರಣ, ರಸ್ತೆ ದುರಸ್ತಿ ಮಾಡುವಂತೆ ಎಂದು ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು.

ದಂಡುದಾಸ ಕೊಡಿಗೆಹಳ್ಳಿಯಿಂದ ಮೆಳೇಕೋಟೆ ರಸ್ತೆ, ಬೀಡಿಗೆರೆ ಗೇಟ್ ಯಿಂದ ದಂಡುದಾಸ ಕೊಡಿಗೆಹಳ್ಳಿವರೆಗಿನ ರಸ್ತೆಗಳಿಗೆ ಜಲ್ಲಿಕಲ್ಲು ಹಾಕಿ ಹಾಗೇ ಬಿಡಲಾಗಿದೆ ಆ ರಸ್ತೆಗಳಿಗೆ ಡಾಂಬರೀಕರಣ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಮನವಿ ಮಾಡಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ‌.ಹೆಚ್‌.ಮುನಿಯಪ್ಪ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾಧಿಕಾರಿ ಡಾ.ಎನ್.ಶಿವಂಶಕರ್, ಅಪರ ಜಿಲ್ಲಾಧಿಕಾರಿ, ತಾ.ಪಂ ಇಒ, ಸುಬ್ರಮಣಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

4 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

15 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

16 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

17 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

19 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago