ತಾಲೂಕಿನಲ್ಲಿ ಕುಂಠಿತಗೊಂಡಿರೋ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಚಿವರಲ್ಲಿ ಮನವಿ- ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ

 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 207 ಕಾಮಾಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಬೀರಸಂದ್ರದ ಜಿಲ್ಲಾಡಳಿತವ ಭವನದಲ್ಲಿ ಈ‌ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲು ಬಂದ ಸಚಿವರು ಆತ್ಮೀಯವಾಗಿ ಬರ ಮಾಡಿಕೊಂಡ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಎಸ್ ಟಿ‌ ಘಟಕದ ಮುಖಂಡರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ತಾಲೂಕಿನಲ್ಲಿ ಕುಂಠಿತಗೊಂಡಿರುವ ಲೋಕೋಪಯೋಗಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಹೋಗುವವರು ಹೆಚ್ಚಿನದಾಗಿ ಕುಂದಾಣ ವೃತ್ತ, ಚಪ್ಪರದಕಲ್ಲು, ಅರುವನಹಳ್ಳಿ, ರಾಮನಾಥಪುರ, ರಬ್ಬನಹಳ್ಳಿ, ಹೆಗ್ಗಡಿಹಳ್ಳಿ ರಸ್ತೆಗಳನ್ನು ಬಳಸುತ್ತಿರುವುದರಿಂದ ರಸ್ತೆ ಹಾಳಾಗಿ, ವಾಹನ ದಟ್ಟಣೆ ಹೆಚ್ಚಾಗಿದೆ, ಹಳ್ಳಿಗರಿಗೆ ತೀವ್ರ ತೊಂದರೆ ಆಗಿದೆ. ಇದರಿಂದ ರಸ್ತೆ ಅಗಲೀಕರಣ, ರಸ್ತೆ ದುರಸ್ತಿ ಮಾಡುವಂತೆ ಎಂದು ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು.

ದಂಡುದಾಸ ಕೊಡಿಗೆಹಳ್ಳಿಯಿಂದ ಮೆಳೇಕೋಟೆ ರಸ್ತೆ, ಬೀಡಿಗೆರೆ ಗೇಟ್ ಯಿಂದ ದಂಡುದಾಸ ಕೊಡಿಗೆಹಳ್ಳಿವರೆಗಿನ ರಸ್ತೆಗಳಿಗೆ ಜಲ್ಲಿಕಲ್ಲು ಹಾಕಿ ಹಾಗೇ ಬಿಡಲಾಗಿದೆ ಆ ರಸ್ತೆಗಳಿಗೆ ಡಾಂಬರೀಕರಣ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಮನವಿ ಮಾಡಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ‌.ಹೆಚ್‌.ಮುನಿಯಪ್ಪ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾಧಿಕಾರಿ ಡಾ.ಎನ್.ಶಿವಂಶಕರ್, ಅಪರ ಜಿಲ್ಲಾಧಿಕಾರಿ, ತಾ.ಪಂ ಇಒ, ಸುಬ್ರಮಣಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

4 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

4 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

17 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

17 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

20 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago