ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಛೇಂಬರ್ ಅಳವಡಿಸಿದ್ದು, ಛೇಂಬರ್ ನಲ್ಲಿದ್ದ ಇಂಟರ್ ನೆಟ್ ಕೇಬಲ್ ನ್ನು ಕದ್ದು ಪರಾರಿಯಾಗಿರುವ ಕಳ್ಳರು.
ತಾಲೂಕಿನ ಪಾಲನಜೋಗಿಹಳ್ಳಿ ಕೆರೆ ಹತ್ತಿರದ ನರ್ಸರಿ ಬಳಿ ಘಟನೆ ನಡೆದಿದ್ದು, ಕೆಲಕಾಲ ನೆಟ್ ಇಲ್ಲದೆ ಪರದಾಡಿದ ಗ್ರಾಹಕರು. ಇದರಿಂದಾಗಿ ಕಂಪನಿಗೆ ಸುಮಾರು 60 ಸಾವಿರ ರೂ. ನಷ್ಟವಾಗಿದೆ.
ಇಂತಹದ್ದೇ ಘಟನೆ ಕೆಲದಿನಗಳ ಹಿಂದೆ ನಗರದ ಕರೇನಹಳ್ಳಿ ಬಳಿಯ ಬೇಕರಿಯೊಂದರ ಬಳಿ ನಡೆದಿತ್ತು. ಅಂದು ಕಂಪನಿಗೆ ಸುಮಾರು 50ಸಾವಿರ ನಷ್ಟ ಉಂಟಾಗಿತ್ತು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಸ್ಥಳದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿದ್ದು, ಸಾರ್ವಜನಿಕರು ಭಯಭೀತಿಯಿಂದ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಕಳ್ಳರ ಹಾವಳಿಯನ್ನ ಮಟ್ಟ ಹಾಕುವಲ್ಲಿ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದು ತಾಲೂಕಿನ ಜನತೆಯ ಆಗ್ರಹ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…