ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಛೇಂಬರ್ ಅಳವಡಿಸಿದ್ದು, ಛೇಂಬರ್ ನಲ್ಲಿದ್ದ ಇಂಟರ್ ನೆಟ್ ಕೇಬಲ್ ನ್ನು ಕದ್ದು ಪರಾರಿಯಾಗಿರುವ ಕಳ್ಳರು.
ತಾಲೂಕಿನ ಪಾಲನಜೋಗಿಹಳ್ಳಿ ಕೆರೆ ಹತ್ತಿರದ ನರ್ಸರಿ ಬಳಿ ಘಟನೆ ನಡೆದಿದ್ದು, ಕೆಲಕಾಲ ನೆಟ್ ಇಲ್ಲದೆ ಪರದಾಡಿದ ಗ್ರಾಹಕರು. ಇದರಿಂದಾಗಿ ಕಂಪನಿಗೆ ಸುಮಾರು 60 ಸಾವಿರ ರೂ. ನಷ್ಟವಾಗಿದೆ.
ಇಂತಹದ್ದೇ ಘಟನೆ ಕೆಲದಿನಗಳ ಹಿಂದೆ ನಗರದ ಕರೇನಹಳ್ಳಿ ಬಳಿಯ ಬೇಕರಿಯೊಂದರ ಬಳಿ ನಡೆದಿತ್ತು. ಅಂದು ಕಂಪನಿಗೆ ಸುಮಾರು 50ಸಾವಿರ ನಷ್ಟ ಉಂಟಾಗಿತ್ತು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಸ್ಥಳದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿದ್ದು, ಸಾರ್ವಜನಿಕರು ಭಯಭೀತಿಯಿಂದ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಕಳ್ಳರ ಹಾವಳಿಯನ್ನ ಮಟ್ಟ ಹಾಕುವಲ್ಲಿ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದು ತಾಲೂಕಿನ ಜನತೆಯ ಆಗ್ರಹ
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…