ತಾಲೂಕಿನಲ್ಲಿ ಮಿತಿಮೀರಿದ ಚಿರತೆ ಹಾವಳಿ: ಚಿರತೆ ದಾಳಿಗೆ ಬಲಿಯಾಗುತ್ತಲೇ ಇರುವ ಮೂಕ ಪ್ರಾಣಿಗಳು: ಕಣ್ಮುಚ್ಚಿ ಕುಳಿತ ಅಧಿಕಾರಿಗಳು: ಜೀವ ಭಯದಲ್ಲಿ ನಾಗರಿಕರು

ತಾಲೂಕಿನಲ್ಲಿ ಚಿರತೆಗಳ ದಾಳಿಗೆ ಒಂದಿಲ್ಲೊಂದು ಮೂಕ ಪ್ರಾಣಿಗಳು ಬಲಿ ಆಗುತ್ತಲೇ ಇವೆ. ಆ ಊರಲ್ಲಿ ಚಿರತೆ ದಾಳಿಗೆ ಮೇಕೆ ಬಲಿ, ಈ ಊರಲ್ಲಿ ಹಸುವನ್ನು ಬಲಿ ಪಡೆದ ಚಿರತೆ ಎಂದು ಮಾಧ್ಯಮಗಳು ವರದಿ ಮಾಡುತ್ತಲೇ ಇವೆ. ಆದರೆ, ಅರಣ್ಯ ಇಲಾಖಾಧಿಕಾರಿಗಳು ಇದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ಕಾಲಕಾಲಕ್ಕೆ ಸಂಬಳ ಎಣಿಸಿಕೊಂಡು ಬೇಜವಾಬ್ದಾರಿ ಮೆರೆಯುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಅರಣ್ಯ ಇಲಾಖೆ ಬೇಜವಾಬ್ದಾರಿ ಜೊತೆಗೆ ಅರಣ್ಯ ನಾಶದಿಂದ ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡುತ್ತಿವೆ. ಇವುಗಳ‌ ಕಾರಣದಿಂದ ಮೂಕ ಪ್ರಾಣಿಗಳು ಬಲಿಯಾಗುತ್ತಿವೆ. ಆದರೆ, ಇದಕ್ಕೆ ಸರ್ಕಾರ ಮಾತ್ರ ಯಾವ ಕ್ರಮ ಕೈಗೊಳ್ಳದೇ ಕೈಕಟ್ಟಿ‌ ಕುಳಿತಿದೆ.

ಜು.24ರಂದು ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಗುಂಡಪ್ಪನಾಯಕನಹಳ್ಳಿಯಲ್ಲಿ ನಡೆದಿತ್ತು.

ಈ ಘಟನೆ ಮಾಸುವ ಮುನ್ನವೇ ಜು.27 ರಂದು ತಾಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನಲ್ಲಿರುವ ಮಾಡೇಶ್ವರ ಗ್ರಾಮದಲ್ಲಿ ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ನಡೆದಿದೆ.

ತಾಲೂಕಿನ ಜನ ಹೆಚ್ಚಾಗಿ ಕೃಷಿ ಹಾಗೂ ಹೈನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ. ಇದೀಗ ಕಾಡು ಪ್ರಾಣಿಗಳ ಉಪಟಳದಿಂದ ಕೃಷಿ ಹಾಗೂ ಹೈನುಗಾರಿಕೆ ಮಾಡಲು ರೈತರಿಗೆ ತೀವ್ರ ತೊಂದರೆ ಉಂಟಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಾಣಿಗಳನ್ನು ಕಳೆದುಕೊಂಡ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಆದರೆ, ಸರ್ಕಾರದಿಂದ ಯಾವ ಪರಿಹಾರವೂ ರೈತರಿಗೆ ಸಿಗುತ್ತಿಲ್ಲ. ನಮಗೆ ಯಾವ ಪರಿಹಾರನೂ ಬೇಡ, ಅರಣ್ಯ ಇಲಾಖೆಯು ಚಿರತೆ ಹಿಡಿಯಲು ಬೋನ್‌ಗಳನ್ನು ಅಳವಡಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಂಡು ಯಾವ ಹಾನಿ ನಡೆಯದಂತೆ ನೋಡಿಕೊಂಡರೆ ಸಾಕು ಎಂದು ಗ್ರಾಮಸ್ಥರು‌ ಒತ್ತಾಯಿಸಿದ್ದಾರೆ.

ಇನ್ನಾದರೂ ನಾಡಿನಂಚಿನಲ್ಲಿರುವ ಚಿರತೆಗಳನ್ನು ಸಂಬಂಧಪಟ್ಟ ಇಲಾಖೆ ಸೆರೆ ಹಿಡಿಯುತ್ತದೆಯೇ..? ಅದೇರೀತಿ ಅರಣ್ಯ ನಾಶವಾಗದಂತೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳುತ್ತದಯೇ ಎಂದು ಕಾದು‌ ನೋಡಬೇಕಾಗಿದೆ.

Ramesh Babu

Journalist

Recent Posts

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

1 hour ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

3 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

19 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

20 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

24 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 day ago