ತಾಲೂಕಿನಲ್ಲಿ ಸುಸೂತ್ರವಾಗಿ ನಡೆದ ಮೊದಲ ದಿನದ SSLC ಪರೀಕ್ಷೆ; ಪ್ರಥಮ ಭಾಷೆ ಪರೀಕ್ಷೆಗೆ 5 ಮಂದಿ ಗೈರು

ಎಸ್‌ಎಸ್‌ಎಲ್‌ಸಿ ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಯಶಸ್ವಿಯಾಗಿ ನೆರವೇರಿದ್ದು, ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 05 ಮಂದಿ ಗೈರಾಗಿದ್ದರು.

ತಾಲೂಕಿನಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲೂ ಮುಖ್ಯ ಅಧೀಕ್ಷಕರ ಕೊಠಡಿ ಮತ್ತು ಸಿ.ಸಿ.ಟಿ.ವಿ ಸುಪರ್ದಿಯಲ್ಲಿ‌ ಪರೀಕ್ಷೆ ನಡೆಸಲಾಯಿತು.

ತಾಲೂಕಿನಲ್ಲಿ 16 ಸರ್ಕಾರಿ ಪ್ರೌಢಶಾಲೆಗಳು, 4 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳು, 12 ಅನುದಾನಿತ ಪ್ರೌಢಶಾಲೆಗಳು, 30 ಅನುದಾನ ರಹಿತ ಪ್ರೌಢಶಾಲೆಗಳನ್ನು ಒಳಗೊಂಡಂತೆ ಒಟ್ಟು 62 ಪ್ರೌಢಶಾಲೆಗಳಿದ್ದು, ಈ ಪ್ರೌಢಶಾಲೆಗಳಿಂದ ಬಾಲಕರು 1861 ಮತ್ತು ಬಾಲಕಿಯರು 1817 ಒಟ್ಟು 3678 ಹೊಸ ವಿದ್ಯಾರ್ಥಿಗಳು ನೋಂದಣಿಯಾಗಿ, 05 ಮಂದಿ ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ.

ಇವರಲ್ಲಿ ಮೊದಲ ದಿನವಾದ ಇಂದು 04 ಮಂದಿ ಹೊಸ ವಿದ್ಯಾರ್ಥಿಗಳು ಹಾಗೂ ಓರ್ವ ಪುನರಾವರ್ತಿತ ವಿದ್ಯಾರ್ಥಿ ಸೇರಿ 05 ಮಂದಿ ಗೈರು ಹಾಜರಾಗಿದ್ದರು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

15 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

21 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago