ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪ್ರಕೃತಿ ವಿಕೋಪದಿಂದ 16,952 ಹೆಕ್ಟೇರ್ ನಷ್ಟು ಬೆಳೆ ನಾಶವಾಗಿದೆ. ಮಳೆಯನ್ನೇ ನೆಚ್ಚಿಕೊಂಡು ರೈತರು ಸಾವಿರಾರು ರೂಪಾಯಿ ವ್ಯಯ ಮಾಡಿ ಬೆಳೆದಿದ್ದ ಬೆಳೆ ಬಾಡಿಹೋಗಿದೆ. ಆಗೊಮ್ಮೆ ಈಗೊಮ್ಮೆ ಬಿದ್ದಿದ್ದ ಮಳೆಗೆ ರಾಗಿ, ಜೊಳ ಸೇರಿದಂತೆ ಇತರೆ ಬೆಳೆಗಳಿಗೆ ಕಳೆ ಬಂದಿತ್ತು, ಆದರೆ ಕಳೆದ ಎರಡ್ಮೂರು ದಿನಗಳಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ಅದೂ ಸಹ ನೆಲಕಚ್ಚಿ ರೈತರನ್ನ ಸಂಕಷ್ಟದ ದವಡೆಗೆ ನೂಕಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಜೊತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಬರ ವೀಕ್ಷಣೆಯನ್ನ ಮಾಡಿ ಮಾತನಾಡಿದ ಅವರು, ಬರ ಘೋಷಣೆ ಮಾಡಿ ಬರ ಪರಿಹಾರವೆಂದು ಇಡೀ ರಾಜ್ಯಕ್ಕೆ 342 ಕೋಟಿ ರೂ. ರಾಜ್ಯ ಸರ್ಕಾರದಿಂದ ಬಿಡುಗಡೆ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕೇವಲ 1ಕೋಟಿ ಮಾತ್ರ ಬಿಡುಗಡೆ ಆಗಿದೆ. ಈ ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ, 15-20ಕೋಟಿ ಬೇಕಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದಿದೆ. ಈ ತಾಲೂಕಿನಲ್ಲಿ ಸಾಸಲು ಹೋಬಳಿ ಎಲ್ಲಾ ರೀತಿಯಲ್ಲಿ ತೀರಾ ಹಿಂದುಳಿದಿದೆ, ಆದ್ದರಿಂದ ಮೊದಲ ಆದ್ಯತೆ ಈ ಭಾಗದ ರೈತರಿಗೆ ನೀಡಬೇಕಾಗಿದೆ ಎಂದು ತಿಳಿಸಿದರು.
ನಮ್ಮ ತಾಲೂಕಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಬಳಿ ಅನುದಾನ ಬೇಕೆಂದು ನಿರಂತರವಾಗಿ ಬೇಡಿಕೆ ಇಡಲಾಗುತ್ತಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(SHDP)ಗೆ 16ಕೋಟಿ 75ಲಕ್ಷ ಕೇಳಿದ್ದೆ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 20ಕೋಟಿ ಕೇಳಿದ್ದೆ. ನಾವು ಬೇಡಿಕೆ ಇಟ್ಟಷ್ಟು ರಾಜ್ಯ ಸರ್ಕಾರ ನೀಡಲಾಗುತ್ತಿದಿಯೇ?, ಆದ್ದರಿಂದ ತಾವು ಮೊದಲು ಬೇಡಿಕೆ ಇಟ್ಟ ಅನುದಾನಕ್ಕೆ ಸ್ಪಂದಿಸುವ ಕೆಲಸ ಮಾಡಿ ತದನಂತರ ಕೇಂದ್ರದ ಮೊರೆ ಹೋಗಬೇಕು, ಅದನ್ನ ಬಿಟ್ಟು ಕೇವಲ ಕೇಂದ್ರದ ಕಡೆಗೆ ಬೊಟ್ಟು ಮಾಡಿ ತೋರಿಸಿದರೆ ಏನೂ ಪ್ರಯೋಜನವಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದರು.
ಮೋದಿ ಅವರು ಪ್ರಧಾನಿ ಆದ ನಂತರ ಕಿಸಾನ್ ಸಮ್ಮಾನ್, ಫಸಲ್ ಭಿಮಾ ಯೋಜನೆ ಸೇರಿದಂತೆ ಹತ್ತು ಹಲವಾರು ಜನ ಹಾಗೂ ರೈತ ಸ್ನೇಹಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದ್ದರಿಂದ ನನಗೆ ಮೋದಿ ಸರ್ಕಾರದ ಬಗ್ಗೆ ಗೊತ್ತು ಅಷ್ಟೇ ಯುಪಿಎ ಸರ್ಕಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…